ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm