ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.
ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm