ಬ್ರೇಕಿಂಗ್ ನ್ಯೂಸ್
05-04-22 02:58 pm Bengaluru Correspondent ಕರ್ನಾಟಕ
ಬೆಂಗಳೂರು, ಎ.5 : ಜಿಮ್ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಬಂದಿದ್ದು ಸಾವಿನ ಅಸಲಿ ಕಾರಣವನ್ನು ಬಿಚ್ಚಿಟ್ಟಿದೆ.
ಬೈಯಪ್ಪನಹಳ್ಳಿಯಲ್ಲಿ ನೆಲೆಸಿದ್ದ ಮಂಗಳೂರು ಮೂಲದ ವಿನಯಾ ಕುಮಾರಿ (35) ಎಂಬ ಮಹಿಳೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಸಾವು ಕಂಡಿದ್ದು ಭಾರೀ ಶಂಕೆ, ಕುತೂಹಲಕ್ಕೆ ಕಾರಣವಾಗಿತ್ತು. ನಟ ಪುನೀತ್ ರಾಜಕುಮಾರ್ ಕೂಡ ಜಿಮ್ ನಲ್ಲಿ ವರ್ಕೌಟ್ ಬಳಿಕ ಕುಸಿದು ಬಿದ್ದು ಮೃತಪಟ್ಟಿದ್ದರಿಂದ ಮಹಿಳೆಯ ಸಾವು ಕೂಡ ಅದೇ ರೀತಿ ಆಗಿದ್ದು ಜನರಲ್ಲಿ ಜಿಮ್ ಬಗ್ಗೆ ಸಂಶಯಗಳು ಮೂಡಿದ್ದವು.
ಮಹಿಳೆ ಸಾವಿನ ಬಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಮ್ನಲ್ಲಿ ಭಾರ ಎತ್ತುತ್ತಿದ್ದಾಗಲೇ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ಮೆದುಳಿನ ರಕ್ತನಾಳದಲ್ಲಿ ಒತ್ತಡ ಹೆಚ್ಚಿದ್ದರಿಂದಾಗಿ ಅವು ಛಿದ್ರಗೊಂಡು ಸೆರೆಬ್ರಲ್ ಹೆಮರೇಜ್ ಆಗಿದ್ದು ಸಾವಿಗೆ ಕಾರಣ ಎನ್ನುವ ಮಾಹಿತಿಯನ್ನು ವೈದ್ಯರು ನೀಡಿದ್ದಾರೆ.
ಯುವತಿ ಸಾವಿನ ಪ್ರಕರಣದಲ್ಲಿ ಬೆಂಗಳೂರು ಪೂರ್ವ ವಿಭಾಗ ಡಿಸಿಪಿ ಡಾ. ಭೀಮಾಶಂಕರ್ ಗುಳೇದ ಹೇಳಿಕೆ ನೀಡಿದ್ದು ವೈದ್ಯರ ವರದಿ ಆಧರಿಸಿ ವಿವರಣೆ ನೀಡಿದ್ದಾರೆ. ಜಿಮ್ನಲ್ಲಿ ವರ್ಕ್ ಔಟ್ ಮಾಡುವ ವೇಳೆ ಭಾರದ ವಸ್ತುಗಳನ್ನು ಲಿಫ್ಟ್ ಮಾಡಿದ್ದಾರೆ. ಇದರಿಂದ ರಕ್ತದ ಒತ್ತಡ ಹೆಚ್ಚಾಗಿ ಮೆದುಳಿನಲ್ಲಿ ರಕ್ತನಾಳಗಳ ಮೇಲೆ ಒತ್ತಡ ಬಿದ್ದಿದೆ. ಮೆದುಳಿನ ರಕ್ತನಾಳಗಳು ಒಡೆದು, ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ ಕುಸಿದು ಬಿದ್ದು ಕೋಮಾಗೆ ಹೋಗಿದ್ದಾರೆ. ಇದರ ಪರಿಣಾಮ ಸಹಜ ಸ್ಥಿತಿಗೆ ಬಾರದೆ ಯುವತಿ ಸಾವನ್ನಪ್ಪಿದ್ದಾಗಿ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.
ಜಿಮ್ ನಲ್ಲಿ ನಿರಂತರ ವರ್ಕೌಟ್ ಮಾಡುವ ಸಂದರ್ಭದಲ್ಲಿ ದೇಹಕ್ಕೆ ಒತ್ತಡ ಬೀಳುವುದು ಸಹಜ. ಆದರೆ ಮೆದುಳಿನ ರಕ್ತನಾಳಗಳು ಒಡೆದು ಹೋಗುವಂತಹ ಸ್ಥಿತಿ ಎದುರಾಗಿರುವುದು ಜಿಮ್ ವರ್ಕೌಟ್ ಬಗ್ಗೆ ಸಂಶಯ ಏಳುವಂತಾಗಿದೆ. ವಿಪರೀತ ವರ್ಕೌಟ್ ಕಾರಣವೇ, ಆಧುನಿಕ ಜೀವನ ಪದ್ಧತಿ ಕಾರಣವೇ ಅನ್ನೋದನ್ನು ವೈದ್ಯರೇ ಖಚಿತ ಪಡಿಸಬೇಕು. ಸದ್ರಿ ಪ್ರಕರಣದಲ್ಲಿ ಯುವತಿ ರಾತ್ರಿ ಶಿಫ್ಟ್ ಮುಗಿಸಿ ಬಂದು ವಿಶ್ರಾಂತಿ ಪಡೆಯುವ ಬದಲು ಜಿಮ್ ಹೋಗಿದ್ದರು. ಇದರಿಂದಲೂ ಹೆಚ್ಚುವರಿ ಒತ್ತಡ ಮೆದುಳಿನ ಮೇಲೆ ಬಿದ್ದಿರುವ ಸಾಧ್ಯತೆಯಿದೆ.
Investigation into the sudden death of a 44-year-old woman at a gym in GM Palya, near CV Raman Nagar, on March 26 has revealed the cause as a rupture in the aneurysm of her brain.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm