ಬ್ರೇಕಿಂಗ್ ನ್ಯೂಸ್
08-04-22 02:40 pm HK Desk news ಕರ್ನಾಟಕ
ಶಿವಮೊಗ್ಗ, ಎ.8: ರಾಜ್ಯದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗ ನಿವಾಸಿ ರಿಯಾಜ್ ಅಹ್ಮದ್ ದೂರಿನಂತೆ ಪ್ರಕರಣ ದಾಖಲಾಗಿದೆ. ಹರ್ಷ ಕೊಲೆ ಪ್ರಕರಣ ಸಂಬಂಧಿಸಿ ಸಚಿವ ಈಶ್ವರಪ್ಪ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆಂದು ಹೇಳಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳಲು ಕಾರಣವಾಗಿದ್ದರು. ಈ ಹೇಳಿಕೆ ಸಂಬಂಧಿಸಿ ರಿಯಾಜ್ ಅಹ್ಮದ್ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆ ನಡೆಸಲು ಕೋರಿದ್ದರು. ಆದರೆ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದರಿಂದ ರಿಯಾಜ್ ಅಹ್ಮದ್, ಹೈಕೋರ್ಟ್ ಮೊರೆ ಹೋಗಿದ್ದರು.

ಸಚಿವ ಸ್ಥಾನದಲ್ಲಿದ್ದು ಒಂದು ಸಮುದಾಯವನ್ನು ಗುರಿಯಾಗಿರಿಸಿ ಹೇಳಿಕೆ ನೀಡಿದ್ದರು. ಅಲ್ಲದೆ, ಈಶ್ವರಪ್ಪ ಹೇಳಿಕೆಯಿಂದಾಗಿ ಕೋಮು ಗಲಭೆ ನಡೆಯಲು ಕಾರಣವಾಗಿತ್ತು ಎಂದು ರಿಯಾಜ್ ಹೈಕೋರ್ಟ್ ನಲ್ಲಿ ವಾದಿಸಿದ್ದರು. ಇದರಂತೆ, ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೇಳಿಕೊಂಡಿದ್ದರು. ಕೋರ್ಟ್ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ಮಾಡಿತ್ತು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿರುವ ಈಶ್ವರಪ್ಪ ತನ್ನದೇ ಮತಕ್ಷೇತ್ರದ ಜನರ ಮೇಲೆ ಆರೋಪ ಹೊರಿಸಿದ್ದು ಬಹಳಷ್ಟು ವಿರೋಧಕ್ಕೂ ಕಾರಣವಾಗಿತ್ತು.
ತನಿಖೆ ನಡೆಯೋ ಮೊದಲೇ ಮುಸಲ್ಮಾನ್ ಗೂಂಡಾಗಳು ಹರ್ಷನನ್ನು ಕೊಲೆ ಮಾಡಿದ್ದಾರೆಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಆನಂತರ ಶವ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಬಹಳಷ್ಟು ಕಡೆ ಕಲ್ಲು ತೂರಾಟ ನಡೆದು ಕೋಮು ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಕೊಲೆ ಪ್ರಕರಣ ಸಂಬಂಧ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದು ಜೈಲಿಗೆ ತಳ್ಳಿದ್ದಾರೆ. ಘಟನೆ ಸಂಬಂಧಿಸಿ ಈಗ ಎನ್ಐಎ ತನಿಖೆ ನಡೆಯುತ್ತಿದ್ದು, ಇದೀಗ ಕೋಮು ಪ್ರಚೋದನೆ ಹಿನ್ನೆಲೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದರಿಂದ ಎನ್ಐಎ ತನಿಖೆ ಇವರ ವಿರುದ್ಧವೂ ವಿಸ್ತರಣೆಯಾದರೆ ಅಚ್ಚರಿಯಿಲ್ಲ.
The Karnataka Police have lodged an FIR against state Minister for Rural Development and Panchayat Raj K.S. Eshwarappa for issuing provoking statements in connection with Bajrang Dal activist Harsha murder case in Shivamogga district, police said on Friday.The Doddapete police have lodged a complaint and taken up the investigation as per the direction of the High Court in this regard. The FIR has also been lodged against Shivamogga BJP corporator Channabasappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am