ಬ್ರೇಕಿಂಗ್ ನ್ಯೂಸ್
08-04-22 03:00 pm Bengaluru Correspondent ಕರ್ನಾಟಕ
ಬೆಂಗಳೂರು, ಎ.8: ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿಯನ್ನು ಹೊಗಳಿ ದಿಟ್ಟ ಯುವತಿ ಎಂದು ಬಣ್ಣಿಸಿ ಅಲ್ ಖೈದಾ ಉಗ್ರರು ವಿಡಿಯೋ ಬಿಡುಗಡೆ ಮಾಡಿರುವ ಘಟನೆಯ ಬಗ್ಗೆ ತನಿಖೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ಅಲ್ ಖೈದಾ ಮುಖ್ಯಸ್ಥ ಅಲ್ ಜವಾಹಿರಿ ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಬಗ್ಗೆ ಹೊಗಳಿ 9 ನಿಮಿಷಗಳ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ. ಮುಸ್ಕಾನ್ ಖಾನ್ ಬಗ್ಗೆ ಅರಬಿ ಭಾಷೆಯಲ್ಲಿ ಹೇಳುತ್ತಿರುವ ವಿಡಿಯೋದಲ್ಲಿ ಕವನದ ಮೂಲಕ ಪ್ರಶಂಸೆಯ ಮಾತುಗಳನ್ನಾಡಿದ್ದ. ಅಲ್ ಖೈದಾ ಮುಖಂಡ ಹಿಜಾಬ್ ವಿಚಾರದಲ್ಲಿ ಮಂಡ್ಯದ ಹುಡುಗಿ ಬಗ್ಗೆ ಪ್ರಶಂಸೆ ಮಾಡಿದ್ದು ಭಾರೀ ಸುದ್ದಿಯಾಗಿತ್ತು. ಅಲ್ಲದೆ, ಸತ್ತಿದ್ದಾನೆಂದು ತಿಳಿಯಲಾಗಿದ್ದ ವ್ಯಕ್ತಿಯೇ ಅರಬಿ ಭಾಷೆಯಲ್ಲಿ ಮಾತನಾಡುತ್ತಿರುವುದು ವಿಡಿಯೋದಲ್ಲಿ ಬಂದಿತ್ತು.
ಮಂಡ್ಯದ ವಿದ್ಯಾರ್ಥಿನಿ ಹಿಜಾಬ್ ಹಾಕಿಕೊಂಡು ಕಾಲೇಜು ಪ್ರವೇಶ ಮಾಡಿದ್ದಾಗ ಅಲ್ಲಿದ್ದ ಹಿಂದು ವಿದ್ಯಾರ್ಥಿಗಳು ಜೈಶ್ರೀರಾಮ್ ಘೋಷಣೆ ಕೂಗಿದ್ದರು. ಇದರಿಂದ ಸಿಟ್ಟಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್, ಪ್ರತಿಯಾಗಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಸಾಗಿದ್ದಳು. ಇದರ ವಿಡಿಯೋ ಭಾರೀ ವೈರಲ್ ಆಗಿದ್ದಲ್ಲದೆ, ಮುಸ್ಲಿಂ ಸಂಘಟನೆಗಳು, ಮುಸ್ಲಿಂ ನಾಯಕರು ಮುಸ್ಕಾನ್ ಕುಟುಂಬಕ್ಕೆ ಭಾರೀ ಕೊಡುಗೆಗಳನ್ನೂ ಕೊಟ್ಟಿದ್ದರು. ಇದೀಗ ಅಲ್ ಖೈದಾ ಉಗ್ರರು ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರಿಂದ ಹಿಜಾಬ್ ಸಂಘರ್ಷದಲ್ಲಿ ಅಂತಾರಾಷ್ಟ್ರೀಯ ಸಂಚು ಇರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರಕಾರದ ಸಚಿವರು ಹೇಳಿಕೆ ನೀಡಿದ್ದರು.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಉಗ್ರನ ವಿಡಿಯೋ ಬಗ್ಗೆ ನನಗೆ ಗೊತ್ತಿಲ್ಲ. ಅಲ್ ಖೈದಾ ಉಗ್ರರಿಗೆ ಮಂಡ್ಯದ ವಿಚಾರ ಹೇಗೆ ಗೊತ್ತಿರೋದು. ಇದನ್ನೆಲ್ಲ ಆರೆಸ್ಸೆಸ್ ನವರು ಸೃಷ್ಟಿ ಮಾಡಿರಬಹುದು. ವಿಡಿಯೋ ಬಗ್ಗೆ ಮುಖ್ಯಮಂತ್ರಿ ಸತ್ಯಾಸತ್ಯತೆ ಏನೆಂದು ಹೇಳಲಿ ಎಂದು ಲಘುವಾಗಿ ಮಾತನಾಡಿದ್ದರು. ಇದರಿಂದ ಸಿಟ್ಟಾಗಿರುವ ಸಿಎಂ ಬೊಮ್ಮಾಯಿ ವಿಡಿಯೋ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ವರಿಷ್ಠರಿಗೆ ಸೂಚನೆ ನೀಡಿದ್ದಾರೆ.
ವಿಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸ್ ವರಿಷ್ಠರಿಗೆ ಸೂಚಿಸಿದ್ದೇನೆ. ವರದಿ ಬಂದ ಮೇಲೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ಸಿದ್ದರಾಮಯ್ಯ ಆರೆಸ್ಸೆಸ್ ಮೇಲೆ ಆರೋಪ ಮಾಡಿದ್ದೆಲ್ಲ ನಿರಾಧಾರವಾದ್ದು. ಅಲ್ ಖೈದಾ ಬಗ್ಗೆ ಪ್ರಶ್ನೆ ಬಂದಾಗ ಸಿದ್ದರಾಮಯ್ಯ ಏಕೆ ಅಪ್ ಸೆಟ್ ಆಗುತ್ತಾರೆ ಅನ್ನೋದು ಗೊತ್ತಾಗಲ್ಲ ಎಂದಿದ್ದಾರೆ ಸಿಎಂ ಬೊಮ್ಮಾಯಿ.
Karnataka Chief Minister Basavaraj Bommai on Thursday said he was not surprised with Al Qaeda chief Ayman al-Zawahiri heaping praise on college student Muskan Khan, who defended her right to wear hijab inside the classroom.The Chief Minister also slammed the leader of the Opposition in the legislative assembly, Siddaramaiah over his statement that Zawahiri's video was doctored and was a 'handiwork' of the Rashtriya Swayamsevak Sangh (RSS).
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm