ಬ್ರೇಕಿಂಗ್ ನ್ಯೂಸ್
09-04-22 02:54 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9: ಉರ್ದು ಬರಲ್ಲ ಎಂಬ ಕಾರಣಕ್ಕೆ ಯುವಕನ ಕೊಲೆಯಾಗಿತ್ತು ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಗೃಹ ಸಚಿವರ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗೃಹ ಸಚಿವರ ಹೇಳಿಕೆ ಸರಿ ಇತ್ತು. ಮಾಹಿತಿ ಆಧರಿಸಿಯೇ ಹೇಳಿಕೆ ನೀಡಿದ್ದರು. ಆದರೆ ಬೆಂಗಳೂರು ಪೊಲೀಸ್ ಕಮಿಷನರ್ ಅವರೇ ಸುಳ್ಳು ಹೇಳಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ.
ಪೊಲೀಸ್ ಕಮಿಷನರ್ ತನ್ನ ತಲೆ ಮೇಲೆ ಬರುತ್ತೆ ಎಂದು ಜನತೆಗೆ ಸುಳ್ಳು ಹೇಳಿದ್ದಾರೆ. ಉರ್ದು ಬರಲ್ಲ ಎಂಬ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಲಾಗಿತ್ತು. ಇದನ್ನು ಆತನ ಜೊತೆಗಿದ್ದ ಸೈಮನ್ ಹೇಳಿದ್ದಾನೆ. ಚಂದ್ರು ಓಡಿಸ್ತಿದ್ದ ಬೈಕ್ ಆಕ್ಸಿಡೆಂಟ್ ಆಗಿದ್ದು ನಿಜ. ಅಲ್ಲಿ ಗಲಾಟೆ ನಡೆದಿದ್ದು ಮಾತಿಗೆ ಮಾತು ಬೆಳೆದಿತ್ತು. ಈ ವೇಳೆ ಉರ್ದುವಿನಲ್ಲಿ ಮಾತನಾಡುವಂತೆ ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಉರ್ದು ನಹೀ ಹೈ ಎಂದು ಹೇಳಿದ್ದಕ್ಕೆ ಚಂದ್ರುವನ್ನು ಚೂರಿಯಿಂದ ಚುಚ್ಚಿ ಕೊಂದಿದ್ದಾರೆ. ಗೂಂಡಾ ಮುಸ್ಲಿಮರು ಈ ಕೃತ್ಯ ಎಸಗಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.
ಈ ವಿಚಾರದಲ್ಲಿ ಗೃಹ ಸಚಿವರು ಹೇಳಿದ್ದರಲ್ಲಿ ಸತ್ಯವಿದೆ. ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಚಂದ್ರು ಗೆಳೆಯ ಸೈಮನ್ ಹೇಳಿದ್ದು ಸತ್ಯವಿದೆ. ಈ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ ಎಂದು ರವಿಕುಮಾರ್ ಹೇಳಿದ್ದಾರೆ. ದೇಶಾದ್ಯಂತ ಇಂಗ್ಲಿಷಿಗಿಂತ ಹೆಚ್ಚು ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ, ಕರ್ನಾಟಕದಲ್ಲಿ ಕನ್ನಡ ಮೊದಲು. ತಮಿಳುನಾಡಿನಲ್ಲಿ ತಮಿಳು ಮೊದಲು. ಅದರಲ್ಲಿ ಎರಡು ಮಾತಿಲ್ಲ. ರಾಷ್ಟ್ರೀಯ ನೆಲೆಯಲ್ಲಿ ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು. ಈ ವಿಚಾರದಲ್ಲಿ ನಮ್ಮ ಸರಕಾರ ಬದ್ಧವಾಗಿದೆ. ಕುಮಾರಸ್ವಾಮಿ ಹೇಳಿಕೆಯನ್ನು ಗಮನಿಸಿದ್ದೇನೆ. ಅಲಿಖಿತ ಆಗಿದ್ದರೂ ಹೆಚ್ಚಿನ ಜನರು ಬಳಸ್ತಿರೋದು ಹಿಂದಿ ಎಂದು ರವಿಕುಮಾರ್ ಹೇಳಿದ್ದಾರೆ.
BJP state secretary Ravikumar has made it clear in the case of a home minister, who was caught in a scuffle that a youth was murdered for not being Urdu.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
19-05-24 12:13 pm
Mangalore Correspondent
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm