ಬ್ರೇಕಿಂಗ್ ನ್ಯೂಸ್
09-04-22 09:41 pm HK Desk news ಕರ್ನಾಟಕ
ಧಾರವಾಡ, ಎ.9: ವಿಧಾನ ಪರಿಷತ್ ಚುನಾವಣೆಗೆ ಶಿಕ್ಷಕರ ಕ್ಷೇತ್ರದಿಂದ ತಾನೇ ಬಿಜೆಪಿ ಅಭ್ಯರ್ಥಿ ಎಂದು ಮೋಹನ್ ಲಿಂಬೆಕಾಯಿ ಹೇಳಿರುವುದರಿಂದ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದ ಜನತಾ ಪರಿವಾರದ ಹಿರಿಯ ಮುಖಂಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತನ್ನ ನಿರ್ಧಾರದಿಂದ ಉಲ್ಟಾ ಹೊಡೆಯಲು ಮುಂದಾಗಿದ್ದಾರೆ.
ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಲಿಂಬೆಕಾಯಿ ಅಭ್ಯರ್ಥಿಯಾದರೆ ನನಗೇನು ತೊಂದರೆ ಇಲ್ಲ. ಬಿಜೆಪಿ ಪಕ್ಷಕ್ಕೆ ನಾನು ಇನ್ನೂ ಹೋಗಿಲ್ಲ. ನನಗೆ ಕೇಳಿದ್ರೂ ನಾನು ಎಲ್ಲವೂ ಡಿಕ್ಲೇರ್ ಆಗಲಿ ಎಂದು ಹೇಳಿದ್ದೆ. ಇನ್ನು ಚುನಾವಣೆ ಡಿಕ್ಲೆರ್ ಆಗಲಿ. ಇನ್ನೂ ಸಮಯ ಇದೆ, ನಾನು ಬಿಜೆಪಿ ಸೆರೋದರ ಬಗ್ಗೆ ಕ್ಲಿಯರ್ ನಿರ್ಧಾರ ಮಾಡಿಲ್ಲ ಎಂದು ಹೊರಟ್ಟಿ ಹೇಳಿದ್ದಾರೆ.
ನಾನು ಸುಳ್ಳು ಹೇಳಲ್ಲ, ಅವರು ನನಗೆ ಟಿಕೆಟ್ ಇಲ್ಲ ಅಂದ್ರು ಅಭ್ಯಂತ್ರ ಇಲ್ಲ. ನಾನು ಚುನಾವಣೆಗೆ ನಿಲ್ಲೋದು ಗ್ಯಾರಂಟಿ. ಹೇಗೆ ನಿಲ್ತೇನಿ ಎಂಬುದನ್ನ ಹೇಳೋಲ್ಲ. ನಾನು ಯಾವ ಪಕ್ಷದಿಂದ ನಿಲ್ಲಲಿ ಬಿಡಲಿ. ಶಿಕ್ಷಕರು ನನ್ನ ಸೋಲಿಸಲಿಕ್ಕೆ ಸಾಧ್ಯನೇ ಇಲ್ಲ, ಅವರೆಲ್ಲರೂ ಸೇರಿ ನನ್ನನ್ನ ಗೆಲ್ಲಿಸಿಯೇ ತೀರುತ್ತಾರೆ. ನನಗೆ ಬಿಜೆಪಿ ಅವರು ನಮ್ಮ ಪಕ್ಷದಿಂದ ನಿಲ್ಲಿ ಎಂದು ಕೇಳಿದ್ರು. ಸಹಜವಾಗಿ ನಾನು ಓಕೆ ಅಂದಿದ್ದೆ.

ನಾನು ಜೆಡಿಎಸ್ ನಿಂದ ದೊಡ್ಡವನಾಗಿದ್ದೇನೆ. ಯಾರಿಗೂ ಜೆಡಿಎಸ್ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ. ಬದಲಾವಣೆಯ ವಿಚಾರವಾಗಿ ಈ ರೀತಿಯಾಗಿದೆ. ಮುಂದೆ ಏನ್ ಆಗುತ್ತೆ ಎಂಬುದನ್ನ ಕಾದು ನೋಡೋಣ. ಶಿಕ್ಷಕರೇ ನಮಗೆ ನೀವೇ ದೇವರು ಅಂತ ಹೇಳ್ತಾ ಇದಾರೆ. ಹೀಗಾಗಿ ಎಲ್ಲದನ್ನೂ ಕಾದು ನೋಡಬೇಕು ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಮೊನ್ನೆಯಷ್ಟೇ ಬಿಜೆಪಿ ಸೇರುವುದು ಖಚಿತ ಎಂದು ಹೇಳಿ ಹೊರಟ್ಟಿ ಅಚ್ಚರಿ ಮೂಡಿಸಿದ್ದರು. ಆದರೆ ಮೋಹನ್ ಲಿಂಬೆಕಾಯಿ ಮಾತನಾಡಿ, ಹೊರಟ್ಟಿ ಅವರನ್ನು ಯಾರೂ ಬಿಜೆಪಿಗೆ ಕರೆದಿಲ್ಲ. ಶಿಕ್ಷಕರ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಹೇಳಿ ಟಾಂಗ್ ನೀಡಿದ್ದರು.
I am not guaranteed to stand for election. But how Nilteane Annodon did not say. "Teachers cannot defeat me, let alone party," deputy chairman Basavaraja said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am