ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm