ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am