ಗುತ್ತಿಗೆದಾರ ಸಂತೋಷ್ ಯಾರೆಂದೇ ಗೊತ್ತಿಲ್ಲ , ಆತನ ಮೇಲೆ ಕೋರ್ಟ್ ಕೇಸ್ ಮಾಡಿದ್ದೇವೆ, ರಾಜಿನಾಮೆ ನೀಡಲ್ಲ ಎಂದ ಸಚಿವ ಈಶ್ವರಪ್ಪ ! 

12-04-22 06:30 pm       HK Desk news   ಕರ್ನಾಟಕ

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. 

ಮೈಸೂರು, ಎ.12 : ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. 

ಆತ ನಮ್ಮ ಇಲಾಖೆ ಮೇಲೆ  ಆರೋಪ ಮಾಡಿದ್ದ. ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಮತ್ತು ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ.‌ ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು.‌

ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ.‌ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಮೈಸೂರಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

In a shocking incident, contractor Santhosh K Patil, who levelled corruption charges against the Karnataka senior BJP minister, KS Eshwarappa, has found dead in a hotel in Udupi on Tuesday, having sent a death note in which he stated that Eeshwarappa was directly responsible for his demise.