ಬ್ರೇಕಿಂಗ್ ನ್ಯೂಸ್
12-04-22 06:49 pm HK Desk news ಕರ್ನಾಟಕ
ಬೆಂಗಳೂರು, ಎ.12: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.
ಗುತ್ತಿಗೆದಾರ ಸಾಯುವುದಕ್ಕೂ ಮುನ್ನ ಈಶ್ವರಪ್ಪ ಹೆಸರು ಹೇಳಿದ್ದಾರೆ. ತನ್ನ ಸಾವಿಗೆ ಈಶ್ವರಪ್ಪನೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಡಿಕೆಶಿ ಆಗ್ರಹಿಸಿದ್ದಾರೆ.
ರಾಜ್ಯ ಮಟ್ಟದ ಗುತ್ತಿಗೆದಾರರ ಸಂಘದ ನಾಯಕರೇ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಬಗ್ಗೆಯೂ ಉಲ್ಲೇಖ ಮಾಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ಆದರೆ ಈಗ ಒಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಯಾರನ್ನೂ ರಕ್ಷಿಸಲು ಹೋಗಬಾರದು. ತನಿಖೆ ನಡೆಸ್ತೀವಿ, ಸತ್ಯ ಹೊರತರುತ್ತೇವೆ ಎಂದು ಹೇಳಿ ಸಮಯ ತಳ್ಳುವ ಕೆಲಸ ಬೇಡ. ಕೂಡಲೇ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಬೇಕು. ಮುಖ್ಯಮಂತ್ರಿ ತಮ್ಮ ಹುದ್ದೆಯ ಗೌರವ ಕಾಪಾಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.
ಸಚಿವರ ವಿರುದ್ಧ ತುಂಬ ಗಂಭೀರವಾದ ಆರೋಪವನ್ನು ಮಾಡಲಾಗಿದೆ. ಹಾಗಾಗಿ ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆಯ ನಾಟಕ ಮಾಡಬಾರದು. ಆಮೇಲೆ ಬಿ ರಿಪೋರ್ಟ್ ಹಾಕಿಸುವ ಕೆಲಸ ಮಾಡುವುದು ಬೇಡ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಡಿಕೆಶಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka Youth Congress workers on Tuesday staged a protest demanding the arrest of minister Eshwarappa in connection with the alleged suicide of contractor Santosh Patil. The protest was held near BJP leader Eshwarappa's house in Shivamogga. All workers were detained by police when they headed for Eshwarappa's residence.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm