ಬ್ರೇಕಿಂಗ್ ನ್ಯೂಸ್
12-04-22 06:49 pm HK Desk news ಕರ್ನಾಟಕ
ಬೆಂಗಳೂರು, ಎ.12: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.
ಗುತ್ತಿಗೆದಾರ ಸಾಯುವುದಕ್ಕೂ ಮುನ್ನ ಈಶ್ವರಪ್ಪ ಹೆಸರು ಹೇಳಿದ್ದಾರೆ. ತನ್ನ ಸಾವಿಗೆ ಈಶ್ವರಪ್ಪನೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಡಿಕೆಶಿ ಆಗ್ರಹಿಸಿದ್ದಾರೆ.

ರಾಜ್ಯ ಮಟ್ಟದ ಗುತ್ತಿಗೆದಾರರ ಸಂಘದ ನಾಯಕರೇ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಬಗ್ಗೆಯೂ ಉಲ್ಲೇಖ ಮಾಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ಆದರೆ ಈಗ ಒಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಯಾರನ್ನೂ ರಕ್ಷಿಸಲು ಹೋಗಬಾರದು. ತನಿಖೆ ನಡೆಸ್ತೀವಿ, ಸತ್ಯ ಹೊರತರುತ್ತೇವೆ ಎಂದು ಹೇಳಿ ಸಮಯ ತಳ್ಳುವ ಕೆಲಸ ಬೇಡ. ಕೂಡಲೇ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಬೇಕು. ಮುಖ್ಯಮಂತ್ರಿ ತಮ್ಮ ಹುದ್ದೆಯ ಗೌರವ ಕಾಪಾಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ಸಚಿವರ ವಿರುದ್ಧ ತುಂಬ ಗಂಭೀರವಾದ ಆರೋಪವನ್ನು ಮಾಡಲಾಗಿದೆ. ಹಾಗಾಗಿ ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆಯ ನಾಟಕ ಮಾಡಬಾರದು. ಆಮೇಲೆ ಬಿ ರಿಪೋರ್ಟ್ ಹಾಕಿಸುವ ಕೆಲಸ ಮಾಡುವುದು ಬೇಡ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಡಿಕೆಶಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka Youth Congress workers on Tuesday staged a protest demanding the arrest of minister Eshwarappa in connection with the alleged suicide of contractor Santosh Patil. The protest was held near BJP leader Eshwarappa's house in Shivamogga. All workers were detained by police when they headed for Eshwarappa's residence.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm