ಬ್ರೇಕಿಂಗ್ ನ್ಯೂಸ್
12-04-22 06:49 pm HK Desk news ಕರ್ನಾಟಕ
ಬೆಂಗಳೂರು, ಎ.12: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.
ಗುತ್ತಿಗೆದಾರ ಸಾಯುವುದಕ್ಕೂ ಮುನ್ನ ಈಶ್ವರಪ್ಪ ಹೆಸರು ಹೇಳಿದ್ದಾರೆ. ತನ್ನ ಸಾವಿಗೆ ಈಶ್ವರಪ್ಪನೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಡಿಕೆಶಿ ಆಗ್ರಹಿಸಿದ್ದಾರೆ.

ರಾಜ್ಯ ಮಟ್ಟದ ಗುತ್ತಿಗೆದಾರರ ಸಂಘದ ನಾಯಕರೇ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಬಗ್ಗೆಯೂ ಉಲ್ಲೇಖ ಮಾಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ಆದರೆ ಈಗ ಒಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಯಾರನ್ನೂ ರಕ್ಷಿಸಲು ಹೋಗಬಾರದು. ತನಿಖೆ ನಡೆಸ್ತೀವಿ, ಸತ್ಯ ಹೊರತರುತ್ತೇವೆ ಎಂದು ಹೇಳಿ ಸಮಯ ತಳ್ಳುವ ಕೆಲಸ ಬೇಡ. ಕೂಡಲೇ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಬೇಕು. ಮುಖ್ಯಮಂತ್ರಿ ತಮ್ಮ ಹುದ್ದೆಯ ಗೌರವ ಕಾಪಾಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ಸಚಿವರ ವಿರುದ್ಧ ತುಂಬ ಗಂಭೀರವಾದ ಆರೋಪವನ್ನು ಮಾಡಲಾಗಿದೆ. ಹಾಗಾಗಿ ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆಯ ನಾಟಕ ಮಾಡಬಾರದು. ಆಮೇಲೆ ಬಿ ರಿಪೋರ್ಟ್ ಹಾಕಿಸುವ ಕೆಲಸ ಮಾಡುವುದು ಬೇಡ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಡಿಕೆಶಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka Youth Congress workers on Tuesday staged a protest demanding the arrest of minister Eshwarappa in connection with the alleged suicide of contractor Santosh Patil. The protest was held near BJP leader Eshwarappa's house in Shivamogga. All workers were detained by police when they headed for Eshwarappa's residence.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am