ಬ್ರೇಕಿಂಗ್ ನ್ಯೂಸ್
23-09-20 09:07 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಬೆಳಗಾವಿ ಸಂಸದ, ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ವಿಧಿವಶರಾಗಿದ್ದಾರೆ.
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್ ಅಂಗಡಿ ಮೃತರಾಗಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ.
2004, 2009, 2014 ಹಾಗೂ 2019ರಲ್ಲಿ ನಾಲ್ಕು ಬಾರಿ ಸಂಸದರಾಗಿದ್ದರು. 15 ದಿನಗಳ ಹಿಂದೆ, ಹೃದಯ ಸಂಬಂಧಿ ರೋಗದಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರು, ಆದರೆ ಅದೇ ಕಾರಣದಿಂದ ಮೃತಪಟ್ಟಿದ್ದಾರೆಯೇ ಅನ್ನೋದು ದೃಢಪಟ್ಟಿಲ್ಲ. ಇತ್ತೀಚಿನ ದಿನದ ವರೆಗೂ ಬಹಳ ಆ್ಯಕ್ಟಿವ್ ಆಗಿದ್ದ ಸುರೇಶ್ ಅಂಗಡಿ ಮೃತರಾಗಿದ್ದು ಬಿಜೆಪಿ ಪಾಳಯದಲ್ಲಿ ದಿಗ್ಭ್ರಮೆ ಮೂಡಿಸಿದೆ.
ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಬೆಳಗಾವಿ ರಾಜಲಕ್ಷ್ಮಣ ಗೌಡ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಮಾಡಿಕೊಂಡಿದ್ದಲ್ಲದೆ ತುಂಬ ಸರಳ ವ್ಯಕ್ತಿತ್ವದಿಂದ ರಾಜ್ಯ ರಾಜಕೀಯದಲ್ಲಿ ಆಕರ್ಷಣೆ ಗಳಿಸಿದ್ದರು.
ಮೂಲತಃ ಶಿಕ್ಷಣೋದ್ಯಮಿ ಆಗಿದ್ದ ಸುರೇಶ್ ಅಂಗಡಿ, ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಬೆಳಗಾವಿ ಮೂಲಕ, ಮುಂಬೈ ಕರ್ನಾಟಕ ಭಾಗದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಬೆಳೆದಿದ್ದರು.
ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ರೋಗ ಲಕ್ಷಣಗಳು ಇಲ್ಲವೆಂದು ಸ್ವತಃ ಸುರೇಶ್ ಅಂಗಡಿ ಹೇಳಿದ್ದರು. ಸೆಪ್ಟಂಬರ್ 11ರಂದು ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದರು. ಒಂದು ವಾರದಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am