ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.
ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm