Breaking: ಸಚಿ​ವ ಸ್ಥಾನಕ್ಕೆ ಕೆ. ಎಸ್. ಈಶ್ವರಪ್ಪ ರಾಜಿನಾಮೆ 

14-04-22 07:06 pm       HK Desk news   ಕರ್ನಾಟಕ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶಿವಮೊಗ್ಗ, ಏ 14: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶಿವಮೊಗ್ಗದಲ್ಲಿ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿದ ಕೆ. ಎಸ್. ಈಶ್ವರಪ್ಪ ರಾಜೀನಾಮೆ ತೀರ್ಮಾನ ಘೋಷಣೆ ಮಾಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಆರೋಪಿ ನಂಬರ್ 1.

ಬುಧವಾರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದ ಈಶ್ವರಪ್ಪ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ. "ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ" ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, "ನನ್ನನ್ನು ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ" ಎಂದು ಹೇಳಿದರು.

"ಈ ಎಪಿಸೋಡ್‌ನಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೀನಿ ಎಂಬ ಪೂರ್ಣ ವಿಶ್ವಾಸವಿದೆ. ನಂದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ" ಎಂದು ಈಶ್ವರಪ್ಪ ತಿಳಿಸಿದರು.

"ಈ ಬಗ್ಗೆ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಹೇಳಿದಾಗ ಸಂತೋಷದಿಂದ ತನಿಖೆ ಮಾಡಿಸುತ್ತೇನೆ ಎಂದರು. ನಮ್ಮ ಮನೆ ದೇವರು ಚೌಡೇಶ್ವರಿ ನಿರಪರಾಧಿಯಾಗಿ ಹೊರ ಬರುತ್ತೇನೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Karnataka minister KS Eshwarappa, caught in a huge controversy following allegations of corruption and his alleged role in the suicide of a contractor, said he will step down from his post tomorrow evening. "Tomorrow I'm handing over the resignation letter to the Chief Minister. I thank you all for co-operation," he told reporters.