ಬ್ರೇಕಿಂಗ್ ನ್ಯೂಸ್
14-04-22 09:15 pm HK Desk news ಕರ್ನಾಟಕ
ತುಮಕೂರು, ಎ.14: ನಾನು ಸಚಿವ, ಶಾಸಕ, ಡಿಸಿಎಂ ಆಗಿದ್ದೇನೆ. ರಾಜ್ಯದಲ್ಲಿ ನಂಬರ್ ಟು ಪೊಸಿಶನ್ ಹೋಗಿದ್ದೇನೆ. ಆದ್ರೂ ನನನ್ನು ದೇವಸ್ಥಾನದೊಳಗೆ ಸೇರಿಸಲ್ಲ. ಹೀಗೆಂದು ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯ ಬಗ್ಗೆ ಬೇಜಾರು ಮಾತಾಡಿದ್ದಾರೆ, ಮಾಜಿ ಡಿಸಿಎಂ ಜಿ.ಪರಮೇಶ್ವರ್.
ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಸಂದರೂ, ಜಾತಿ ವ್ಯವಸ್ಥೆಯನ್ನು ತೊಲಗಿಸಲು ಪಣ ತೊಟ್ಟು ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ನೀಡಿದರೂ ನಮ್ಮಲ್ಲಿ ಸ್ಥಿತಿ ಬದಲಾಗಿಲ್ಲ. ನಾನು ದಲಿತ ಎಂಬ ಕಾರಣಕ್ಕೆ ದೇವಾಲಯದ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಬೇಸರ ಹೊರಗೆ ಹಾಕಿದ್ದಾರೆ.
ನಾನು ಹಲವು ದೇಶಗಳನ್ನು ಸುತ್ತಾಡಿ ಬಂದಿದ್ದೇನೆ, ನಾನು ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ, ರಾಜ್ಯದ ಅಧಿಕಾರ ಕೇಂದ್ರದಲ್ಲಿ ನಂಬರ್ ಟು ಆಗಿದ್ದೇನೆ. ಆದರೆ ನನಗೆ ದೇವಸ್ಥಾನಕ್ಕೆ ಸೇರಿಸಲ್ಲ. ನಾನು ದೇವಸ್ಥಾನಕ್ಕೆ ಹೋದ್ರೆ ಸ್ವಲ್ಪ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಎಂದು ಹೇಳಿ ಮಂಗಳಾರತಿ ತಟ್ಟೆ ತಂದು ಬಿಡ್ತಾರೆ. ನಾನು ಎಲ್ಲಿ ದೇವಾಲಯದೊಳಗೆ ಬಂದು ಬಿಡ್ತೀನೋ ಅಂತ ಹೀಗೆ ಮಾಡ್ತಾರೆ. ಇಂತಹ ಪರಿಸ್ಥಿತಿ ಈಗಲೂ ಸಮಾಜದಲ್ಲಿದೆ. ಅಂಬೇಡ್ಕರ್ ಹೆಸರಲ್ಲಿ ಜಯಂತಿ ಆಚರಣೆ ಮಾಡುತ್ತೇವೆ. ಆದರೆ ಜಾತಿ ವ್ಯವಸ್ಥೆಯ ತಾರತಮ್ಯ ಬದಲಾಗದ ಹೊರತು ಅಂಬೇಡ್ಕರ್ ಹೆಸರಲ್ಲಿ ಕಾರ್ಯಕ್ರಮ ಮಾಡಿ ಪ್ರಯೋಜನ ಇಲ್ಲ ಎಂದು ಕಾರ್ಯಕ್ರಮದ ವೇದಿಕೆ ಭಾಷಣದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.
A minister, a legislator, a DCM and gone to the number two position in the state, And it is not included in the temple. Former DCM G.Parameshwar said that the caste system is rooted in the society.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm