ಬ್ರೇಕಿಂಗ್ ನ್ಯೂಸ್
15-04-22 02:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.15: ಈಶ್ವರಪ್ಪ ಪ್ರಕರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯದ ಬಿಜೆಪಿ ಸರಕಾರ ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಕೈತೊಳೆದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಪೊಲೀಸ್ ವರಿಷ್ಠ ಪ್ರವೀಣ್ ಸೂದ್ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವುದರಿಂದ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ತೀವ್ರ ಇರಿಸು ಮುರಿಸಿಗೆ ಒಳಗಾಗಿದೆ. ಒಂದೆಡೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈ ರೀತಿಯ ಬೆಳವಣಿಗೆ ಆಗಿರುವುದು ಮತ್ತು ಕಾಂಗ್ರೆಸ್ ಪಾಲಿಗೆ ಈ ಪ್ರಕರಣ ಅಸ್ತ್ರ ಕೊಟ್ಟಂತಾಗಿರುವುದು ಬಿಜೆಪಿ ನಾಯಕರು ಚಿಂತೆಗೆ ಒಳಗಾಗಿದ್ದಾರೆ. ಒಂದು ಹಂತಕ್ಕೆ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಉದ್ದೇಶದಿಂದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪ್ರಕರಣವನ್ನು ಸಿಐಡಿಗೆ ಕೊಡುವ ವಿಚಾರದಲ್ಲಿ ಬಿಜೆಪಿ ನಾಯಕರ ಒಳಗೆ ಗಂಭೀರ ಚರ್ಚೆ ನಡೆದಿದ್ದು, ಡಿಜಿಪಿ ಪ್ರವೀಣ್ ಸೂದ್ ಜೊತೆ ಸಿಎಂ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ವಿಸ್ತೃತ ಮಾಹಿತಿ ಪಡೆದ ಸಿಎಂ ಬೊಮ್ಮಾಯಿ, ಈಶ್ವರಪ್ಪ ಮೇಲಿನ ಕಮಿಷನ್ ಆರೋಪ, ಸಂತೋಷ್ ಆತ್ಮಹತ್ಯೆ ನಂತರ ಈಶ್ವರಪ್ಪ ವಿರುದ್ಧ ಆಗಿರುವ ಎಫ್ಐಆರ್, ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ಇತ್ಯಾದಿ ಪ್ರಕರಣಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನೆಪದಲ್ಲಿ ಸಿಐಡಿ ತಂಡಕ್ಕೆ ವಹಿಸಲಿದ್ದಾರೆ ಎನ್ನುವ ಮಾಹಿತಿಗಳಿವೆ.

ಈಶ್ವರಪ್ಪ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿ ಪಡೆದಿರುವ ಸಿಎಂ ಬೊಮ್ಮಾಯಿ, ಶೀಘ್ರವೇ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರಕ್ಕೆ ಬಂದಿದ್ದಾರೆ. ಆ ಮೂಲಕ ಸದ್ಯದ ಮಟ್ಟಿಗೆ ವಿಪಕ್ಷಗಳ ಬಾಯಿ ಮುಚ್ಚಿಸುವ ತಂತ್ರಗಾರಿಕೆ ನಡೆದಿದೆ. ಈಗಾಗಲೇ ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವ ವಿಪಕ್ಷಗಳಿಗೆ, ಗುತ್ತಿಗೆದಾರರ ಆರೋಪ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಸಿಐಡಿಗೆ ವಹಿಸಿದ್ದೇವೆ ಎಂದು ಸೂಕ್ತ ಪ್ರತ್ಯುತ್ತರ ಕೊಡಲು ಸಿಎಂ ಯೋಜನೆ ಹಾಕಿದ್ದಾರೆ.
"I am not under any pressure. There is nothing to do with the high command. It is all purely depending on preliminary investigation decision will be taken," said Karnataka Chief Minister Basavaraj Bommai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am