ಬ್ರೇಕಿಂಗ್ ನ್ಯೂಸ್
15-04-22 02:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.15: ಈಶ್ವರಪ್ಪ ಪ್ರಕರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯದ ಬಿಜೆಪಿ ಸರಕಾರ ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಕೈತೊಳೆದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಪೊಲೀಸ್ ವರಿಷ್ಠ ಪ್ರವೀಣ್ ಸೂದ್ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವುದರಿಂದ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ತೀವ್ರ ಇರಿಸು ಮುರಿಸಿಗೆ ಒಳಗಾಗಿದೆ. ಒಂದೆಡೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈ ರೀತಿಯ ಬೆಳವಣಿಗೆ ಆಗಿರುವುದು ಮತ್ತು ಕಾಂಗ್ರೆಸ್ ಪಾಲಿಗೆ ಈ ಪ್ರಕರಣ ಅಸ್ತ್ರ ಕೊಟ್ಟಂತಾಗಿರುವುದು ಬಿಜೆಪಿ ನಾಯಕರು ಚಿಂತೆಗೆ ಒಳಗಾಗಿದ್ದಾರೆ. ಒಂದು ಹಂತಕ್ಕೆ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಉದ್ದೇಶದಿಂದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪ್ರಕರಣವನ್ನು ಸಿಐಡಿಗೆ ಕೊಡುವ ವಿಚಾರದಲ್ಲಿ ಬಿಜೆಪಿ ನಾಯಕರ ಒಳಗೆ ಗಂಭೀರ ಚರ್ಚೆ ನಡೆದಿದ್ದು, ಡಿಜಿಪಿ ಪ್ರವೀಣ್ ಸೂದ್ ಜೊತೆ ಸಿಎಂ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ವಿಸ್ತೃತ ಮಾಹಿತಿ ಪಡೆದ ಸಿಎಂ ಬೊಮ್ಮಾಯಿ, ಈಶ್ವರಪ್ಪ ಮೇಲಿನ ಕಮಿಷನ್ ಆರೋಪ, ಸಂತೋಷ್ ಆತ್ಮಹತ್ಯೆ ನಂತರ ಈಶ್ವರಪ್ಪ ವಿರುದ್ಧ ಆಗಿರುವ ಎಫ್ಐಆರ್, ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ಇತ್ಯಾದಿ ಪ್ರಕರಣಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನೆಪದಲ್ಲಿ ಸಿಐಡಿ ತಂಡಕ್ಕೆ ವಹಿಸಲಿದ್ದಾರೆ ಎನ್ನುವ ಮಾಹಿತಿಗಳಿವೆ.

ಈಶ್ವರಪ್ಪ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿ ಪಡೆದಿರುವ ಸಿಎಂ ಬೊಮ್ಮಾಯಿ, ಶೀಘ್ರವೇ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರಕ್ಕೆ ಬಂದಿದ್ದಾರೆ. ಆ ಮೂಲಕ ಸದ್ಯದ ಮಟ್ಟಿಗೆ ವಿಪಕ್ಷಗಳ ಬಾಯಿ ಮುಚ್ಚಿಸುವ ತಂತ್ರಗಾರಿಕೆ ನಡೆದಿದೆ. ಈಗಾಗಲೇ ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವ ವಿಪಕ್ಷಗಳಿಗೆ, ಗುತ್ತಿಗೆದಾರರ ಆರೋಪ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಸಿಐಡಿಗೆ ವಹಿಸಿದ್ದೇವೆ ಎಂದು ಸೂಕ್ತ ಪ್ರತ್ಯುತ್ತರ ಕೊಡಲು ಸಿಎಂ ಯೋಜನೆ ಹಾಕಿದ್ದಾರೆ.
"I am not under any pressure. There is nothing to do with the high command. It is all purely depending on preliminary investigation decision will be taken," said Karnataka Chief Minister Basavaraj Bommai.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm