ಬ್ರೇಕಿಂಗ್ ನ್ಯೂಸ್
15-04-22 02:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.15: ಈಶ್ವರಪ್ಪ ಪ್ರಕರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯದ ಬಿಜೆಪಿ ಸರಕಾರ ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಕೈತೊಳೆದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಪೊಲೀಸ್ ವರಿಷ್ಠ ಪ್ರವೀಣ್ ಸೂದ್ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವುದರಿಂದ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ತೀವ್ರ ಇರಿಸು ಮುರಿಸಿಗೆ ಒಳಗಾಗಿದೆ. ಒಂದೆಡೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈ ರೀತಿಯ ಬೆಳವಣಿಗೆ ಆಗಿರುವುದು ಮತ್ತು ಕಾಂಗ್ರೆಸ್ ಪಾಲಿಗೆ ಈ ಪ್ರಕರಣ ಅಸ್ತ್ರ ಕೊಟ್ಟಂತಾಗಿರುವುದು ಬಿಜೆಪಿ ನಾಯಕರು ಚಿಂತೆಗೆ ಒಳಗಾಗಿದ್ದಾರೆ. ಒಂದು ಹಂತಕ್ಕೆ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಉದ್ದೇಶದಿಂದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಪ್ರಕರಣವನ್ನು ಸಿಐಡಿಗೆ ಕೊಡುವ ವಿಚಾರದಲ್ಲಿ ಬಿಜೆಪಿ ನಾಯಕರ ಒಳಗೆ ಗಂಭೀರ ಚರ್ಚೆ ನಡೆದಿದ್ದು, ಡಿಜಿಪಿ ಪ್ರವೀಣ್ ಸೂದ್ ಜೊತೆ ಸಿಎಂ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ವಿಸ್ತೃತ ಮಾಹಿತಿ ಪಡೆದ ಸಿಎಂ ಬೊಮ್ಮಾಯಿ, ಈಶ್ವರಪ್ಪ ಮೇಲಿನ ಕಮಿಷನ್ ಆರೋಪ, ಸಂತೋಷ್ ಆತ್ಮಹತ್ಯೆ ನಂತರ ಈಶ್ವರಪ್ಪ ವಿರುದ್ಧ ಆಗಿರುವ ಎಫ್ಐಆರ್, ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ಇತ್ಯಾದಿ ಪ್ರಕರಣಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನೆಪದಲ್ಲಿ ಸಿಐಡಿ ತಂಡಕ್ಕೆ ವಹಿಸಲಿದ್ದಾರೆ ಎನ್ನುವ ಮಾಹಿತಿಗಳಿವೆ.
ಈಶ್ವರಪ್ಪ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿ ಪಡೆದಿರುವ ಸಿಎಂ ಬೊಮ್ಮಾಯಿ, ಶೀಘ್ರವೇ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರಕ್ಕೆ ಬಂದಿದ್ದಾರೆ. ಆ ಮೂಲಕ ಸದ್ಯದ ಮಟ್ಟಿಗೆ ವಿಪಕ್ಷಗಳ ಬಾಯಿ ಮುಚ್ಚಿಸುವ ತಂತ್ರಗಾರಿಕೆ ನಡೆದಿದೆ. ಈಗಾಗಲೇ ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವ ವಿಪಕ್ಷಗಳಿಗೆ, ಗುತ್ತಿಗೆದಾರರ ಆರೋಪ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಸಿಐಡಿಗೆ ವಹಿಸಿದ್ದೇವೆ ಎಂದು ಸೂಕ್ತ ಪ್ರತ್ಯುತ್ತರ ಕೊಡಲು ಸಿಎಂ ಯೋಜನೆ ಹಾಕಿದ್ದಾರೆ.
"I am not under any pressure. There is nothing to do with the high command. It is all purely depending on preliminary investigation decision will be taken," said Karnataka Chief Minister Basavaraj Bommai.
29-04-24 09:08 pm
HK News Desk
Five students drowned, Mekedatu: ಮೇಕೆದಾಟು ; ಬ...
29-04-24 06:34 pm
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 08:05 pm
Mangalore Correspondent
Kumpala Suicide, Mangalore: ಕುಂಪಲದಲ್ಲಿ ಇಬ್ಬರು...
29-04-24 11:05 am
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm