ಬ್ರೇಕಿಂಗ್ ನ್ಯೂಸ್
24-09-20 11:51 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: 'ಕರ್ನಾಟಕದಲ್ಲಿ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ಆಂಧ್ರಪ್ರದೇಶದ ಮಾದರಿಯಲ್ಲಿ ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಗುವುದು' ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಿದ್ಧಪಡಿಸಿರುವ ಮಸೂದೆಯನ್ನು ಸದನದಲ್ಲಿ ಮಂಡಿಸುವಂತೆ ವಿಧಾನ ಪರಿಷತ್ನಲ್ಲಿ ಬುಧವಾರ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಈ ಭರವಸೆ ನೀಡಿದರು.
ಉದ್ಯಮ ಸ್ಥಾಪನೆಗೆ ಕನ್ನಡದ ನೆಲ, ಜಲವನ್ನು ಬಳಸಿಕೊಳ್ಳುವ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ.
ಕೆಳಹಂತದ ಕೆಲವು ಉದ್ಯೋಗಗಳನ್ನು ನೀಡಿ ವಂಚಿಸುತ್ತವೆ. ಸರ್ಕಾರದ ಸೌಲಭ್ಯ ಪಡೆದ ಉದ್ದಿಮೆಗಳಷ್ಟೇ ಅಲ್ಲ, ಸೌಲಭ್ಯ ಪಡೆಯದ ಉದ್ದಿಮೆಗಳೂ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಕ್ಕಾಗಿ ಆಂಧ್ರಪ್ರದೇಶ ಮಾದರಿ ಅನುಷ್ಠಾನ ಮಾಡಲಾಗುವುದು' ಎಂದರು.
ವಿಷಯ ಪ್ರಸ್ತಾಪಿಸಿದ ಹೊರಟ್ಟಿ, 'ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರನ್ನು ಪರಭಾಷಿಕ ಶಾಸಕರೇ ಆಳುವ ದಿನಗಳು ಬಂದರೂ ಅಚ್ಚರಿ ಇಲ್ಲ. ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸುವ ಮೂಲಕ ನ್ಯಾಯ ಒದಗಿಸಬೇಕು' ಎಂದರು.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm