ಬ್ರೇಕಿಂಗ್ ನ್ಯೂಸ್
24-09-20 11:51 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: 'ಕರ್ನಾಟಕದಲ್ಲಿ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ಆಂಧ್ರಪ್ರದೇಶದ ಮಾದರಿಯಲ್ಲಿ ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಗುವುದು' ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಿದ್ಧಪಡಿಸಿರುವ ಮಸೂದೆಯನ್ನು ಸದನದಲ್ಲಿ ಮಂಡಿಸುವಂತೆ ವಿಧಾನ ಪರಿಷತ್ನಲ್ಲಿ ಬುಧವಾರ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಈ ಭರವಸೆ ನೀಡಿದರು.
ಉದ್ಯಮ ಸ್ಥಾಪನೆಗೆ ಕನ್ನಡದ ನೆಲ, ಜಲವನ್ನು ಬಳಸಿಕೊಳ್ಳುವ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ.
ಕೆಳಹಂತದ ಕೆಲವು ಉದ್ಯೋಗಗಳನ್ನು ನೀಡಿ ವಂಚಿಸುತ್ತವೆ. ಸರ್ಕಾರದ ಸೌಲಭ್ಯ ಪಡೆದ ಉದ್ದಿಮೆಗಳಷ್ಟೇ ಅಲ್ಲ, ಸೌಲಭ್ಯ ಪಡೆಯದ ಉದ್ದಿಮೆಗಳೂ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಕ್ಕಾಗಿ ಆಂಧ್ರಪ್ರದೇಶ ಮಾದರಿ ಅನುಷ್ಠಾನ ಮಾಡಲಾಗುವುದು' ಎಂದರು.
ವಿಷಯ ಪ್ರಸ್ತಾಪಿಸಿದ ಹೊರಟ್ಟಿ, 'ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರನ್ನು ಪರಭಾಷಿಕ ಶಾಸಕರೇ ಆಳುವ ದಿನಗಳು ಬಂದರೂ ಅಚ್ಚರಿ ಇಲ್ಲ. ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸುವ ಮೂಲಕ ನ್ಯಾಯ ಒದಗಿಸಬೇಕು' ಎಂದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am