ಬ್ರೇಕಿಂಗ್ ನ್ಯೂಸ್
16-04-22 03:28 pm HK Desk news ಕರ್ನಾಟಕ
ಬೆಳಗಾವಿ, ಎ.16 : ಸಂತೋಷ ಪಾಟೀಲ್ ಕಾಮಗಾರಿ ಬಗ್ಗೆ ಮನವಿ ಕೊಟ್ಟಿದ್ದಾಗಲೇ ಸರ್ಕಾರ ಎಚ್ಚತ್ತುಕೊಳ್ಳಬೇಕಿತ್ತು. ನಕಲಿ ಕಾಮಗಾರಿ ಆಗಿದ್ದರೆ ಯಾಕೆ ಕ್ರಮ ಕೈಗೊಂಡಿರಲಿಲ್ಲ. ಈಗ ಕಾಮಗಾರಿ ಆರ್ಡರ್ ಕೊಟ್ಟಿಲ್ಲಾಂದ್ರೆ ಯಾರು ನಂಬಬೇಕು ಇವರನ್ನು. ಸಾಮಾನ್ಯ ಜನ ಯಾರಾದ್ರು ಆತ್ಮಹತ್ಯೆಗೆ ಕಾರಣರಾಗಿದ್ದರೆ, ಅವರ ಹೆಸರು ಇರ್ತಿದ್ರೆ ಪೊಲೀಸರು ಬಂಧಿಸುತ್ತಿರಲಿಲ್ಲವೇ?ಎಫ್ಐಆರ್ ನಲ್ಲಿ ಹೆಸರಿರುವ ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ ರಾವ್ ಆಗ್ರಹಿಸಿದ್ದಾರೆ.
ಸರಕಾರದ್ದೇ ಭಾಗವಾಗಿರುವ ವ್ಯಕ್ತಿ ಆರೋಪಿ ಇರಬೇಕಿದ್ದರೆ ಸರ್ಕಾರವೇ ತನಿಖೆ ನಡೆಸುವುದು ಎಷ್ಟು ಸರಿ. ತನಿಖಾಧಿಕಾರಿಗೆ ಅಷ್ಟು ಸ್ವಾತಂತ್ರ್ಯ ಕೊಡುತ್ತಾರೆಯೇ.. ಕೋರ್ಟ್ ಕಣ್ಗಾವಲಿನಲ್ಲಿ ಅಥವಾ ನಿವೃತ್ತ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಿದರೆ ಓಕೆ. ಸರಕಾರದಡಿ ಇರುವ ಅಧಿಕಾರಿ ತನಿಖೆ ನಡೆಸೋದಾದ್ರೆ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎನ್ನುವುದು ಹೇಗೆ ಎಂದು ಭಾಸ್ಕರ್ ರಾವ್ ಪ್ರಶ್ನಿಸಿದರು.

ಗುತ್ತಿಗೆದಾರ ಸಂತೋಷ ಪಾಟೀಲ್ ವಿಶ್ವಾಸದ ಮೇಲೆ ಕೆಲಸ ಮಾಡಿದ್ದಿರಬಹುದು. ಆದರೆ ಆತನನ್ನು ಅವಮಾನಿಸಿ, ಕಾಯಿಸಿದ್ದು ಆತ್ಮಹತ್ಯೆಗೆ ಕಾರಣವಾಗಿದೆ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಆಮ್ ಆದ್ಮಿ ಪಕ್ಷವು ಇವರ ಭ್ರಷ್ಟಾಚಾರವನ್ನೇ ಮುಂದಿಟ್ಟು ಹೋರಾಟ ನಡೆಸಲಿದೆ. ಬೆಳಗಾವಿ ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಪ್ರಭಾವಿಗಳನ್ನು ಮುಟ್ಟೋಕೂ ಆಗಲ್ಲ ಎನ್ನುವ ಭ್ರಮೆಯನ್ನು ತೆಗೆದು ಹಾಕುತ್ತೇವೆ. ನಮಗೆ ಪ್ರಚಾರ ಮುಖ್ಯ ಅಲ್ಲ, ವ್ಯಕ್ತಿಗಳೂ ಮುಖ್ಯ ಅಲ್ಲ. ಎದುರಾಳಿ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರವೇ ಮುಖ್ಯ. ಭ್ರಷ್ಟಾಚಾರದ ಪರಿಣಾಮ ನೇರವಾಗಿ ಜನರ ಮೇಲಾಗುತ್ತಿದೆ. ನಾವು ಜನಸಾಮಾನ್ಯರ ಪಕ್ಷವಾಗಿದ್ದು ಜನರ ಪರ ನಿಲ್ಲುತ್ತೇವೆ ಎಂದು ಹೇಳಿದರು.
Santosh Patil worked on trust. Humiliation and shame have been the cause of suicide. Both national parties do not have the morality to speak about this. The money had to be released even after the work began. Both parties must shed crocodile tears. "Only the AAP has a moral right to speak about it," said Bhaskar Rao, a former IPS officer.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm