ಬ್ರೇಕಿಂಗ್ ನ್ಯೂಸ್
17-04-22 04:28 pm Bengaluru Correspondent ಕರ್ನಾಟಕ
ಬೆಂಗಳೂರು, ಎ.17 : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ 'ಮಾತಿನ ಮಲ್ಲ' ಸಿ.ಎಂ.ಇಬ್ರಾಹಿಂ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ, ಮಾತನಾಡಿದ ಇಬ್ರಾಹಿಂ, ಕಾಲ ಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹರ ಹರ ಮಹದೇವ ಎಂದು ಜೋಳಿಗೆ ತೆಗೆದುಕೊಂಡು ಹೊರಡುತ್ತೇನೆ. ಮುಂದಿನ ಬಾರಿ ಕುಮಾರಸ್ವಾಮಿ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜೆಡಿಎಸ್ ಎನ್ನುವುದು ನನಗೆ ಪಾರ್ಟಿ ಅಲ್ಲ, ಅದು ನನ್ನ ಪಾಲಿಗೆ ಕುಟುಂಬ. ನಾನು ಒಂದು ವರ್ಷದಿಂದ ಏನು ಹೇಳುತ್ತಾ ಬಂದಿದ್ದೇನೋ ಅದೇ ಆಗ್ತಾಯಿದೆ. ದೇವೇಗೌಡರಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ಬೆಂಬಲ ವಾಪಸ್ ಪಡೆದ ವೇಳೆ ಅಟಲ್ ಬಿಹಾರಿ ವಾಜಪೇಯಿ ಅವರು ಗೌಡರಿಗೆ ಬೆಂಬಲ ಕೊಡುತ್ತೇವೆಂದು ಮುಂದೆ ಬಂದಿದ್ದರು. ಆದ್ರೆ ನಮ್ಮ ಗೌಡರು ಅವರ ಬೆಂಬಲ ತೆಗೆದುಕೊಳ್ಳಲು ಹೋಗಲಿಲ್ಲ. ಅದು ಗೌಡರ ರಾಜಕಾರಣ. ಇದೇ ಗೌಡರ ಸಮ್ಮುಖದಲ್ಲಿ ಕುಮಾರಸ್ವಾಮಿ ಪಟ್ಟಾಭಿಷೇಕ ಮಾಡ್ತೀವಿ. ಮೇ ತಿಂಗಳಿನಲ್ಲಿ ನಾವೆಲ್ಲಾ ಉತ್ತರ ಕರ್ನಾಟಕಕ್ಕೆ ಹೋಗುತ್ತೇವೆ. ಇನ್ನು ಬೇರೆ ಪ್ರಶ್ನೆಯೇ ಇಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.

ಕುಮಾರಸ್ವಾಮಿಯನ್ನ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಯೇ ಭಾಷಣ ಆರಂಭಿಸಿದ ಅವರು, ಕುಮಾರಸ್ವಾಮಿ ಅವರು ನನಗಿಂತ ದೊಡ್ಡ ಹುದ್ದೆ ತಗೊಂಡಿದ್ದಾರೆ. ನಮ್ಮದು ಬರೀ ತುತ್ತೂರಿ ಊದುವುದು. ಕುಮಾರಸ್ವಾಮಿಯನ್ನು ಸಿಎಂ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದರು.

ಇದಕ್ಕೂ ಮುನ್ನ ಪಕ್ಷದ ಧ್ವಜವನ್ನು ಕೊಟ್ಟು ಸಿಎಂ ಇಬ್ರಾಹಿಂ ಅವರನ್ನು ಪಕ್ಷಕ್ಕೆ ಸ್ವಾಗತಿಸಿ, ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟ ಎಚ್.ಕೆ.ಕುಮಾರಸ್ವಾಮಿ ಗದ್ಗದಿತರಾಗಿ ಮಾತನಾಡಿದರು. ನಮ್ಮ ಪಕ್ಷದಲ್ಲಿ ಹುದ್ದೆ ಅಷ್ಟೇ. ಅಧಿಕಾರ ಇಲ್ಲ. ಅಧಿಕಾರ ಒಂದೇ ಕಡೆ ಇರುತ್ತದೆ. ನನ್ನನ್ನು ರಾಜ್ಯಾಧ್ಯಕ್ಷನಾಗಿ ಗುರುತಿಸಿ ಮೇಲಕ್ಕೆ ತಂದಿದ್ದಾರೆ. ಈಗ ಹೊಸತಾಗಿ ಅಧ್ಯಕ್ಷರು ಬಂದಿದ್ದಾರೆ. ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.
ಒಂದು ವರ್ಷದಿಂದ ಕಾಂಗ್ರೆಸ್ ತ್ಯಜಿಸುವುದಾಗಿ ಹೇಳಿಕೊಂಡು ಬಂದಿದ್ದ ಸಿ.ಎಂ.ಇಬ್ರಾಹಿಂ ಇತ್ತೀಚೆಗೆ ವಿಧಾನ ಪರಿಷತ್ ಸ್ಥಾನ ಮತ್ತು ಪಕ್ಷದ ಸದಸ್ಯಕ್ಕೂ ರಾಜಿನಾಮೆ ನೀಡಿದ್ದರು. ಅದೇ ವೇಳೆಗೆ, ಮುಂದೆ ಜೆಡಿಎಸ್ ಸೇರುವುದಾಗಿ ಹೇಳಿದ್ದರು. ಅದರಂತೆ, ಚುನಾವಣೆ ತಯಾರಿಯಲ್ಲಿರುವ ಜೆಡಿಎಸ್ ಈಗ ರಾಜ್ಯಾಧ್ಯಕ್ಷ ಸ್ಥಾನ ನೀಡಿಯೇ ಪಕ್ಷಕ್ಕೆ ಬರಮಾಡಿಕೊಂಡಿದೆ.
CM Ibrahim was sworn in as the new JDS President today. Party Office Deve Gowda, former CM HD Kumaraswamy in the presence of JDS senior Deve Gowda. Ibrahim handed over the power to them.Speaking to CM Ibrahim, I thank the next Chief Minister Kumaraswamy. Deve Gowda was PM at the time because Congress made a mistake. He made the same mistake in 2023 and expressed confidence that Kumaraswamy will now become CM.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm