ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am