ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm