ಬ್ರೇಕಿಂಗ್ ನ್ಯೂಸ್
19-04-22 01:13 pm HK Desk news ಕರ್ನಾಟಕ
ಬೆಳಗಾವಿ, ಎ.19 : ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಉಡುಪಿ ಪೊಲೀಸರು ಹಿಂಡಲಗಾ ಗ್ರಾಪಂ ಅಧಿಕಾರಿಗಳು, ಅಧ್ಯಕ್ಷ, ಉಪ ಗುತ್ತಿಗೆದಾರರು, ಪಿಡಿಓ ಗುರಿಯಾಗಿಸಿ ತನಿಖೆ ನಡೆಸುತ್ತಿದ್ದು ವಿಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಸೋಮವಾರ ಇಡೀ ದಿನ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ಕೈಗೊಂಡು ಈಗಿನ ಪಿಡಿಒ ವಸಂತಕುಮಾರಿ ಮತ್ತು ಈ ಹಿಂದಿನ ಪಿಡಿಒ ಗಂಗಾಧರ ನಾಯಕ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಗುತ್ತಿಗೆ ಸಂಬಂಧಿತ ಪಂಚಾಯತಿ ಕಚೇರಿಯ ಕಡತಗಳನ್ನ ಪರಿಶೀಲನೆ ನಡೆಸಿದ್ದಾರೆ. ಗುತ್ತಿಗೆದಾರ ಸಂತೋಷ ಪಾಟೀಲ ಕೆಲಸ ಮಾಡಿದ್ದಾಗ ಹಿಂಡಲಗಾ ಪಿಡಿಓ ಆಗಿದ್ದ ಗಂಗಾಧರ ನಾಯಿಕ ಅವರಿಂದ ಮಾಹಿತಿ ಪಡೆದಿದ್ದಾರೆ. ಸಂತೋಷ್ ಪಾಟೀಲ್ ಕಾಮಗಾರಿ ಕೈಗೊಳ್ಳುವ ಮುನ್ನ ಗ್ರಾಮ ಪಂಚಾಯತ್ನಿಂದ ಅನುಮತಿ ಪಡೆದಿದ್ದರಾ? ಎಲ್ಲೆಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ನಡೆದಿರುವುದು ನಿಜವೇ? ವರ್ಕ್ ಆರ್ಡರ್ ಇಲ್ಲದೇ ಅನುಮತಿ ಹೇಗೆ ಕೊಟ್ಟಿದ್ದೀರಿ..? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಇಂದು ಉಡುಪಿ ಪೊಲೀಸರು, ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮನೆಗೆ ಭೇಟಿ ನೀಡಿದ್ದು ವಿಚಾರಣೆ ನಡೆಸಿದ್ದಾರೆ. ಇನ್ಸ್ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ಪೊಲೀಸರ ತಂಡ ಹಿಂಡಲಗಾದ ಲಕ್ಷ್ಮೀ ನಗರದ ಸಮರ್ಥ ಕಾಲೋನಿಯ ನಾಗೇಶ್ ಮನ್ನೋಳಕರ್ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದೆ. ಸಂತೋಷ ಪಾಟೀಲ್ ಮಾಡಿದ್ದಾರೆ ಎನ್ನಲಾದ 108 ಕಾಮಗಾರಿಗಳ ಬಗ್ಗೆ ಗ್ರಾಪಂ ಅಧ್ಯಕ್ಷರಿಂದಲೇ ನೇರವಾಗಿ ಮಾಹಿತಿ ಪಡೆಯುತ್ತಿದ್ದಾರೆ. ನಾಗೇಶ್ ಮನ್ನೋಳಕರ್ ಹೇಳಿಕೆಯ ಜೊತೆ ಮನೆಯಲ್ಲಿ ಕೆಲವು ದಾಖಲೆಗಳನ್ನೂ ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ, ಸಂತೋಷ್ ಪಾಟೀಲ್ ಕೈಕೆಳಗೆ ಕೆಲಸ ಮಾಡಿದ್ದ 12 ಮಂದಿ ಉಪ ಗುತ್ತಿಗೆದಾರರು ಕೂಡ ಗ್ರಾಪಂ ಅಧ್ಯಕ್ಷ ನಾಗೇಶ್ ಮುನ್ನೋಳ್ಕರ್ ಮನೆಗೆ ಆಗಮಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂತೋಷ ಪಾಟೀಲ್ ಸೂಚನೆ ಮೇರೆಗೆ ತಾವು ಕಾಮಗಾರಿ ಮಾಡಿದ್ದಾಗಿ 12 ಉಪ ಗುತ್ತಿಗೆದಾರರು ಹೇಳಿಕೆ ನೀಡಿದ್ದು ಅದೇ ಮನೆಯಲ್ಲಿ ಪೊಲೀಸರು 12 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಹಿಂದೆ ಸಂತೋಷ್ ಪಾಟೀಲಗೆ ತಾನೇ ಹೇಳಿಸಿ ಕಾಮಗಾರಿ ಮಾಡಿಸಿದ್ದಾಗಿ ಗ್ರಾಪಂ ಅಧ್ಯಕ್ಷ ನಾಗೇಶ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.
Udupi police visit Santosh home town Belagavi and enquire panchayat officials over his suicide. On Monday night, a suicide note was allegedly sent from Patil’s phone number to journalists and friends via WhatsApp. In it, Patil purportedly holds Eshwarappa, Karnataka’s rural development and panchayat raj (RDPR) minister, to be solely responsible for his death.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm