ಬ್ರೇಕಿಂಗ್ ನ್ಯೂಸ್
19-04-22 01:13 pm HK Desk news ಕರ್ನಾಟಕ
ಬೆಳಗಾವಿ, ಎ.19 : ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಉಡುಪಿ ಪೊಲೀಸರು ಹಿಂಡಲಗಾ ಗ್ರಾಪಂ ಅಧಿಕಾರಿಗಳು, ಅಧ್ಯಕ್ಷ, ಉಪ ಗುತ್ತಿಗೆದಾರರು, ಪಿಡಿಓ ಗುರಿಯಾಗಿಸಿ ತನಿಖೆ ನಡೆಸುತ್ತಿದ್ದು ವಿಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಸೋಮವಾರ ಇಡೀ ದಿನ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ಕೈಗೊಂಡು ಈಗಿನ ಪಿಡಿಒ ವಸಂತಕುಮಾರಿ ಮತ್ತು ಈ ಹಿಂದಿನ ಪಿಡಿಒ ಗಂಗಾಧರ ನಾಯಕ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಗುತ್ತಿಗೆ ಸಂಬಂಧಿತ ಪಂಚಾಯತಿ ಕಚೇರಿಯ ಕಡತಗಳನ್ನ ಪರಿಶೀಲನೆ ನಡೆಸಿದ್ದಾರೆ. ಗುತ್ತಿಗೆದಾರ ಸಂತೋಷ ಪಾಟೀಲ ಕೆಲಸ ಮಾಡಿದ್ದಾಗ ಹಿಂಡಲಗಾ ಪಿಡಿಓ ಆಗಿದ್ದ ಗಂಗಾಧರ ನಾಯಿಕ ಅವರಿಂದ ಮಾಹಿತಿ ಪಡೆದಿದ್ದಾರೆ. ಸಂತೋಷ್ ಪಾಟೀಲ್ ಕಾಮಗಾರಿ ಕೈಗೊಳ್ಳುವ ಮುನ್ನ ಗ್ರಾಮ ಪಂಚಾಯತ್ನಿಂದ ಅನುಮತಿ ಪಡೆದಿದ್ದರಾ? ಎಲ್ಲೆಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ನಡೆದಿರುವುದು ನಿಜವೇ? ವರ್ಕ್ ಆರ್ಡರ್ ಇಲ್ಲದೇ ಅನುಮತಿ ಹೇಗೆ ಕೊಟ್ಟಿದ್ದೀರಿ..? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಇಂದು ಉಡುಪಿ ಪೊಲೀಸರು, ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮನೆಗೆ ಭೇಟಿ ನೀಡಿದ್ದು ವಿಚಾರಣೆ ನಡೆಸಿದ್ದಾರೆ. ಇನ್ಸ್ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ಪೊಲೀಸರ ತಂಡ ಹಿಂಡಲಗಾದ ಲಕ್ಷ್ಮೀ ನಗರದ ಸಮರ್ಥ ಕಾಲೋನಿಯ ನಾಗೇಶ್ ಮನ್ನೋಳಕರ್ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದೆ. ಸಂತೋಷ ಪಾಟೀಲ್ ಮಾಡಿದ್ದಾರೆ ಎನ್ನಲಾದ 108 ಕಾಮಗಾರಿಗಳ ಬಗ್ಗೆ ಗ್ರಾಪಂ ಅಧ್ಯಕ್ಷರಿಂದಲೇ ನೇರವಾಗಿ ಮಾಹಿತಿ ಪಡೆಯುತ್ತಿದ್ದಾರೆ. ನಾಗೇಶ್ ಮನ್ನೋಳಕರ್ ಹೇಳಿಕೆಯ ಜೊತೆ ಮನೆಯಲ್ಲಿ ಕೆಲವು ದಾಖಲೆಗಳನ್ನೂ ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ, ಸಂತೋಷ್ ಪಾಟೀಲ್ ಕೈಕೆಳಗೆ ಕೆಲಸ ಮಾಡಿದ್ದ 12 ಮಂದಿ ಉಪ ಗುತ್ತಿಗೆದಾರರು ಕೂಡ ಗ್ರಾಪಂ ಅಧ್ಯಕ್ಷ ನಾಗೇಶ್ ಮುನ್ನೋಳ್ಕರ್ ಮನೆಗೆ ಆಗಮಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂತೋಷ ಪಾಟೀಲ್ ಸೂಚನೆ ಮೇರೆಗೆ ತಾವು ಕಾಮಗಾರಿ ಮಾಡಿದ್ದಾಗಿ 12 ಉಪ ಗುತ್ತಿಗೆದಾರರು ಹೇಳಿಕೆ ನೀಡಿದ್ದು ಅದೇ ಮನೆಯಲ್ಲಿ ಪೊಲೀಸರು 12 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಹಿಂದೆ ಸಂತೋಷ್ ಪಾಟೀಲಗೆ ತಾನೇ ಹೇಳಿಸಿ ಕಾಮಗಾರಿ ಮಾಡಿಸಿದ್ದಾಗಿ ಗ್ರಾಪಂ ಅಧ್ಯಕ್ಷ ನಾಗೇಶ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.
Udupi police visit Santosh home town Belagavi and enquire panchayat officials over his suicide. On Monday night, a suicide note was allegedly sent from Patil’s phone number to journalists and friends via WhatsApp. In it, Patil purportedly holds Eshwarappa, Karnataka’s rural development and panchayat raj (RDPR) minister, to be solely responsible for his death.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm