ಬ್ರೇಕಿಂಗ್ ನ್ಯೂಸ್
19-04-22 01:13 pm HK Desk news ಕರ್ನಾಟಕ
ಬೆಳಗಾವಿ, ಎ.19 : ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಉಡುಪಿ ಪೊಲೀಸರು ಹಿಂಡಲಗಾ ಗ್ರಾಪಂ ಅಧಿಕಾರಿಗಳು, ಅಧ್ಯಕ್ಷ, ಉಪ ಗುತ್ತಿಗೆದಾರರು, ಪಿಡಿಓ ಗುರಿಯಾಗಿಸಿ ತನಿಖೆ ನಡೆಸುತ್ತಿದ್ದು ವಿಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಸೋಮವಾರ ಇಡೀ ದಿನ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ಕೈಗೊಂಡು ಈಗಿನ ಪಿಡಿಒ ವಸಂತಕುಮಾರಿ ಮತ್ತು ಈ ಹಿಂದಿನ ಪಿಡಿಒ ಗಂಗಾಧರ ನಾಯಕ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಗುತ್ತಿಗೆ ಸಂಬಂಧಿತ ಪಂಚಾಯತಿ ಕಚೇರಿಯ ಕಡತಗಳನ್ನ ಪರಿಶೀಲನೆ ನಡೆಸಿದ್ದಾರೆ. ಗುತ್ತಿಗೆದಾರ ಸಂತೋಷ ಪಾಟೀಲ ಕೆಲಸ ಮಾಡಿದ್ದಾಗ ಹಿಂಡಲಗಾ ಪಿಡಿಓ ಆಗಿದ್ದ ಗಂಗಾಧರ ನಾಯಿಕ ಅವರಿಂದ ಮಾಹಿತಿ ಪಡೆದಿದ್ದಾರೆ. ಸಂತೋಷ್ ಪಾಟೀಲ್ ಕಾಮಗಾರಿ ಕೈಗೊಳ್ಳುವ ಮುನ್ನ ಗ್ರಾಮ ಪಂಚಾಯತ್ನಿಂದ ಅನುಮತಿ ಪಡೆದಿದ್ದರಾ? ಎಲ್ಲೆಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ನಡೆದಿರುವುದು ನಿಜವೇ? ವರ್ಕ್ ಆರ್ಡರ್ ಇಲ್ಲದೇ ಅನುಮತಿ ಹೇಗೆ ಕೊಟ್ಟಿದ್ದೀರಿ..? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಇಂದು ಉಡುಪಿ ಪೊಲೀಸರು, ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮನೆಗೆ ಭೇಟಿ ನೀಡಿದ್ದು ವಿಚಾರಣೆ ನಡೆಸಿದ್ದಾರೆ. ಇನ್ಸ್ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ಪೊಲೀಸರ ತಂಡ ಹಿಂಡಲಗಾದ ಲಕ್ಷ್ಮೀ ನಗರದ ಸಮರ್ಥ ಕಾಲೋನಿಯ ನಾಗೇಶ್ ಮನ್ನೋಳಕರ್ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದೆ. ಸಂತೋಷ ಪಾಟೀಲ್ ಮಾಡಿದ್ದಾರೆ ಎನ್ನಲಾದ 108 ಕಾಮಗಾರಿಗಳ ಬಗ್ಗೆ ಗ್ರಾಪಂ ಅಧ್ಯಕ್ಷರಿಂದಲೇ ನೇರವಾಗಿ ಮಾಹಿತಿ ಪಡೆಯುತ್ತಿದ್ದಾರೆ. ನಾಗೇಶ್ ಮನ್ನೋಳಕರ್ ಹೇಳಿಕೆಯ ಜೊತೆ ಮನೆಯಲ್ಲಿ ಕೆಲವು ದಾಖಲೆಗಳನ್ನೂ ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ, ಸಂತೋಷ್ ಪಾಟೀಲ್ ಕೈಕೆಳಗೆ ಕೆಲಸ ಮಾಡಿದ್ದ 12 ಮಂದಿ ಉಪ ಗುತ್ತಿಗೆದಾರರು ಕೂಡ ಗ್ರಾಪಂ ಅಧ್ಯಕ್ಷ ನಾಗೇಶ್ ಮುನ್ನೋಳ್ಕರ್ ಮನೆಗೆ ಆಗಮಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂತೋಷ ಪಾಟೀಲ್ ಸೂಚನೆ ಮೇರೆಗೆ ತಾವು ಕಾಮಗಾರಿ ಮಾಡಿದ್ದಾಗಿ 12 ಉಪ ಗುತ್ತಿಗೆದಾರರು ಹೇಳಿಕೆ ನೀಡಿದ್ದು ಅದೇ ಮನೆಯಲ್ಲಿ ಪೊಲೀಸರು 12 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಹಿಂದೆ ಸಂತೋಷ್ ಪಾಟೀಲಗೆ ತಾನೇ ಹೇಳಿಸಿ ಕಾಮಗಾರಿ ಮಾಡಿಸಿದ್ದಾಗಿ ಗ್ರಾಪಂ ಅಧ್ಯಕ್ಷ ನಾಗೇಶ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.
Udupi police visit Santosh home town Belagavi and enquire panchayat officials over his suicide. On Monday night, a suicide note was allegedly sent from Patil’s phone number to journalists and friends via WhatsApp. In it, Patil purportedly holds Eshwarappa, Karnataka’s rural development and panchayat raj (RDPR) minister, to be solely responsible for his death.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am