ಬ್ರೇಕಿಂಗ್ ನ್ಯೂಸ್
19-04-22 01:38 pm HK Desk news ಕರ್ನಾಟಕ
ಬೆಳಗಾವಿ, ಎ.18 : ಬಿಜೆಪಿ ಆಡಳಿತ ಇರುವ ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ 104 ಕಾಮಗಾರಿಗಳನ್ನು ಮಾಡಿಸಿದ್ದು ಈ ಬಗ್ಗೆ ಈಶ್ವರಪ್ಪ ಉಲ್ಟಾ ಹೇಳಿಕೆ ನೀಡಿದ್ದರಿಂದ ಕಾಮಗಾರಿ ಬಗ್ಗೆಯೇ ಅನುಮಾನ ವ್ಯಕ್ತವಾಗಿತ್ತು. ಆದರೆ ಗ್ರಾಪಂ ಅಧ್ಯಕ್ಷ ನಾಗೇಶ್ ಮಂಡೋಳಕರ್ ಇದೀಗ ಹೇಳಿಕೆ ನೀಡಿದ್ದು , ಎಲ್ಲ ಕಾಮಗಾರಿ ನಡೆದಿದ್ದು ಸತ್ಯ ಎಂದಿದ್ದಾರೆ.
ಸಂತೋಷ ಪಾಟೀಲ್ ಜೊತೆ 12 ಜನ ಉಪ ಗುತ್ತಿಗೆದಾರರು ಕಾಮಗಾರಿ ಮಾಡಿದ್ದಾರೆ. 4 ಕೋಟಿ ವೆಚ್ಚದಲ್ಲಿ 108 ಕಾಮಗಾರಿಗಳನ್ನ ಎಲ್ಲರೂ ಸೇರಿ ಮಾಡಿದ್ದಾರೆ. ಸಂತೋಷ ಪಾಟೀಲ್ 50 ಲಕ್ಷದ ಕಾಮಗಾರಿ ಸ್ವಂತ ನೆಲೆಯಲ್ಲಿ ಮಾಡಿದ್ದ. ಉಳಿದವರಿಗೆ ಸಬ್ ಕಾಂಟ್ರ್ಯಾಕ್ಟ್ ನೀಡಲಾಗಿತ್ತು. ಇದಕ್ಕಾಗಿ ಪ್ರತ್ಯೇಕ ವರ್ಕ್ ಆರ್ಡರ್ ಇರಲಿಲ್ಲ. RDPR ಫಂಡ್ ಇದೆ ಎಂದು ಸಂತೋಷ ಪಾಟೀಲ್ ಹೇಳುತ್ತಿದ್ದ.

ನಿನ್ನೆ ಎಲ್ಲ ಗುತ್ತಿಗೆದಾರರ ಜೊತೆ ರಮೇಶ ಜಾರಕಿಹೊಳಿಯವರನ್ನ ಭೇಟಿಯಾಗಿದ್ದೇವೆ. ನಾವು ಕೆಲಸ ಮಾಡಿದ್ದೇವೆ, ಹೀಗಾಗಿ
ಸರ್ಕಾರದೊಂದಿಗೆ ಮಾತನಾಡಿ ಬಿಲ್ ಕೊಡಿಸುವಂತೆ ಮನವಿ ಮಾಡಿದ್ದೇವೆ. ಕಾಮಗಾರಿ ವಿಚಾರವಾಗಿ ರಮೇಶ ಜಾರಕಿಹೊಳಿಯವ್ರು ಈಶ್ವರಪ್ಪರನ್ನ ಭೇಟಿಯಾಗಲು ತಿಳಿಸಿಲ್ಲ. ವರ್ಕ್ ಆರ್ಡರ್ ಕುರಿತು ನನಗೆ ಮಾಹಿತಿಯಿಲ್ಲ, ಸಂತೋಷ ಪಾಟೀಲ್ ಅದನ್ನ ಫಾಲೋಅಪ್ ಮಾಡ್ತಿದ್ರು.

ಕಾಮಗಾರಿ ಕುರಿತು ಪಂಚಾಯತಿಯಲ್ಲಿ ಯಾವುದೇ ಠರಾವು ಪಾಸ್ ಮಾಡಿಲ್ಲ. RDPR ಸ್ಪೆಷಲ್ ಫಂಡ್ ಇದೆ, ಹೀಗಾಗಿ ಠರಾವು ಅಗತ್ಯವಿಲ್ಲ ಎಂದು ಸಂತೋಷ ಪಾಟೀಲ್ ಹೇಳಿದ್ದ. ಅದರಂತೆ, ಉಪ ಗುತ್ತಿಗೆದಾರರು ಸೇರಿ ಕಾನಗಾರಿ ನಿರ್ವಹಣೆ ಮಾಡಿದ್ದರು. ಹಿಂಡಲಗಾ ಗ್ರಾಮದಲ್ಲಿ ಎಲ್ಲ ಕಡೆ ಕಾಮಗಾರಿ ಆಗಿದ್ದು ನಿಜ ಇದೆ.

ಹಾಗೆಂದು, ಸಂತೋಷ ಪಾಟೀಲ್ ಗೆ ಹಣದ ವಿಚಾರವಾಗಿ ಯಾರು ಕೂಡ ಒತ್ತಡ ಹಾಕಿರಲಿಲ್ಲ. ಸಂತೋಷ ಪಾಟೀಲ್ ಮತ್ತು ಸಬ್ ಕಾಂಟ್ರಾಕ್ಟರುಗಳು ಎಲ್ಲರ ಮಧ್ಯೆ ಸಂಬಂಧ ಚೆನ್ನಾಗಿದೆ. ಈ ನಡುವೆ ಸಚಿವ ಈಶ್ವರಪ್ಪರನ್ನ ಎರಡು ಭಾರಿ ಭೇಟಿಯಾಗಿದ್ದೆವು. ನನಗೆ ಕನ್ನಡದ ಲ್ಯಾಂಗ್ವೇಜ್ ಸಮಸ್ಯೆ ಇದ್ದುದರಿಂದ ಏನು ಮಾತನಾಡಿದ್ರು ಎಂದು ಅರ್ಥವಾಗಿಲ್ಲ. ನನಗೆ ಮರಾಠಿ, ಹಿಂದಿ ಮಾತ್ರ ಗೊತ್ತಿರೋದು. ಹಾಗಾಗಿ ಸಂತೋಷ ಪಾಟೀಲ್ ಈಶ್ವರಪ್ಪನವರ ಜೊತೆ ಮಾತನಾಡುತ್ತಿದ್ದ. ಕಾಮಗಾರಿ ಎಲ್ಲದರ ಬಗ್ಗೆ ನಮಗೂ ಹೇಳುತ್ತಿದ್ದ. ಈ ವೇಳೆ ಯಾವುದೇ ಸ್ವಾಮೀಜಿಗಳು ಯಾರೂ ನಮ್ಮ ಜೊತೆ ಬಂದಿರಲಿಲ್ಲ ಎಂದು ಗ್ರಾಪಂ ಅಧ್ಯಕ್ಷ ನಾಗೇಶ್ ಮುನ್ನೋಳ್ಕರ್ ಹೇಳಿದ್ದಾರೆ.
Bjp gram panchayat president refuses all statements made by KS Eshwarappa on RDPR.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am