ಬ್ರೇಕಿಂಗ್ ನ್ಯೂಸ್
19-04-22 01:38 pm HK Desk news ಕರ್ನಾಟಕ
ಬೆಳಗಾವಿ, ಎ.18 : ಬಿಜೆಪಿ ಆಡಳಿತ ಇರುವ ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ 104 ಕಾಮಗಾರಿಗಳನ್ನು ಮಾಡಿಸಿದ್ದು ಈ ಬಗ್ಗೆ ಈಶ್ವರಪ್ಪ ಉಲ್ಟಾ ಹೇಳಿಕೆ ನೀಡಿದ್ದರಿಂದ ಕಾಮಗಾರಿ ಬಗ್ಗೆಯೇ ಅನುಮಾನ ವ್ಯಕ್ತವಾಗಿತ್ತು. ಆದರೆ ಗ್ರಾಪಂ ಅಧ್ಯಕ್ಷ ನಾಗೇಶ್ ಮಂಡೋಳಕರ್ ಇದೀಗ ಹೇಳಿಕೆ ನೀಡಿದ್ದು , ಎಲ್ಲ ಕಾಮಗಾರಿ ನಡೆದಿದ್ದು ಸತ್ಯ ಎಂದಿದ್ದಾರೆ.
ಸಂತೋಷ ಪಾಟೀಲ್ ಜೊತೆ 12 ಜನ ಉಪ ಗುತ್ತಿಗೆದಾರರು ಕಾಮಗಾರಿ ಮಾಡಿದ್ದಾರೆ. 4 ಕೋಟಿ ವೆಚ್ಚದಲ್ಲಿ 108 ಕಾಮಗಾರಿಗಳನ್ನ ಎಲ್ಲರೂ ಸೇರಿ ಮಾಡಿದ್ದಾರೆ. ಸಂತೋಷ ಪಾಟೀಲ್ 50 ಲಕ್ಷದ ಕಾಮಗಾರಿ ಸ್ವಂತ ನೆಲೆಯಲ್ಲಿ ಮಾಡಿದ್ದ. ಉಳಿದವರಿಗೆ ಸಬ್ ಕಾಂಟ್ರ್ಯಾಕ್ಟ್ ನೀಡಲಾಗಿತ್ತು. ಇದಕ್ಕಾಗಿ ಪ್ರತ್ಯೇಕ ವರ್ಕ್ ಆರ್ಡರ್ ಇರಲಿಲ್ಲ. RDPR ಫಂಡ್ ಇದೆ ಎಂದು ಸಂತೋಷ ಪಾಟೀಲ್ ಹೇಳುತ್ತಿದ್ದ.
ನಿನ್ನೆ ಎಲ್ಲ ಗುತ್ತಿಗೆದಾರರ ಜೊತೆ ರಮೇಶ ಜಾರಕಿಹೊಳಿಯವರನ್ನ ಭೇಟಿಯಾಗಿದ್ದೇವೆ. ನಾವು ಕೆಲಸ ಮಾಡಿದ್ದೇವೆ, ಹೀಗಾಗಿ
ಸರ್ಕಾರದೊಂದಿಗೆ ಮಾತನಾಡಿ ಬಿಲ್ ಕೊಡಿಸುವಂತೆ ಮನವಿ ಮಾಡಿದ್ದೇವೆ. ಕಾಮಗಾರಿ ವಿಚಾರವಾಗಿ ರಮೇಶ ಜಾರಕಿಹೊಳಿಯವ್ರು ಈಶ್ವರಪ್ಪರನ್ನ ಭೇಟಿಯಾಗಲು ತಿಳಿಸಿಲ್ಲ. ವರ್ಕ್ ಆರ್ಡರ್ ಕುರಿತು ನನಗೆ ಮಾಹಿತಿಯಿಲ್ಲ, ಸಂತೋಷ ಪಾಟೀಲ್ ಅದನ್ನ ಫಾಲೋಅಪ್ ಮಾಡ್ತಿದ್ರು.
ಕಾಮಗಾರಿ ಕುರಿತು ಪಂಚಾಯತಿಯಲ್ಲಿ ಯಾವುದೇ ಠರಾವು ಪಾಸ್ ಮಾಡಿಲ್ಲ. RDPR ಸ್ಪೆಷಲ್ ಫಂಡ್ ಇದೆ, ಹೀಗಾಗಿ ಠರಾವು ಅಗತ್ಯವಿಲ್ಲ ಎಂದು ಸಂತೋಷ ಪಾಟೀಲ್ ಹೇಳಿದ್ದ. ಅದರಂತೆ, ಉಪ ಗುತ್ತಿಗೆದಾರರು ಸೇರಿ ಕಾನಗಾರಿ ನಿರ್ವಹಣೆ ಮಾಡಿದ್ದರು. ಹಿಂಡಲಗಾ ಗ್ರಾಮದಲ್ಲಿ ಎಲ್ಲ ಕಡೆ ಕಾಮಗಾರಿ ಆಗಿದ್ದು ನಿಜ ಇದೆ.
ಹಾಗೆಂದು, ಸಂತೋಷ ಪಾಟೀಲ್ ಗೆ ಹಣದ ವಿಚಾರವಾಗಿ ಯಾರು ಕೂಡ ಒತ್ತಡ ಹಾಕಿರಲಿಲ್ಲ. ಸಂತೋಷ ಪಾಟೀಲ್ ಮತ್ತು ಸಬ್ ಕಾಂಟ್ರಾಕ್ಟರುಗಳು ಎಲ್ಲರ ಮಧ್ಯೆ ಸಂಬಂಧ ಚೆನ್ನಾಗಿದೆ. ಈ ನಡುವೆ ಸಚಿವ ಈಶ್ವರಪ್ಪರನ್ನ ಎರಡು ಭಾರಿ ಭೇಟಿಯಾಗಿದ್ದೆವು. ನನಗೆ ಕನ್ನಡದ ಲ್ಯಾಂಗ್ವೇಜ್ ಸಮಸ್ಯೆ ಇದ್ದುದರಿಂದ ಏನು ಮಾತನಾಡಿದ್ರು ಎಂದು ಅರ್ಥವಾಗಿಲ್ಲ. ನನಗೆ ಮರಾಠಿ, ಹಿಂದಿ ಮಾತ್ರ ಗೊತ್ತಿರೋದು. ಹಾಗಾಗಿ ಸಂತೋಷ ಪಾಟೀಲ್ ಈಶ್ವರಪ್ಪನವರ ಜೊತೆ ಮಾತನಾಡುತ್ತಿದ್ದ. ಕಾಮಗಾರಿ ಎಲ್ಲದರ ಬಗ್ಗೆ ನಮಗೂ ಹೇಳುತ್ತಿದ್ದ. ಈ ವೇಳೆ ಯಾವುದೇ ಸ್ವಾಮೀಜಿಗಳು ಯಾರೂ ನಮ್ಮ ಜೊತೆ ಬಂದಿರಲಿಲ್ಲ ಎಂದು ಗ್ರಾಪಂ ಅಧ್ಯಕ್ಷ ನಾಗೇಶ್ ಮುನ್ನೋಳ್ಕರ್ ಹೇಳಿದ್ದಾರೆ.
Bjp gram panchayat president refuses all statements made by KS Eshwarappa on RDPR.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm