ಬ್ರೇಕಿಂಗ್ ನ್ಯೂಸ್
19-04-22 07:55 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.19: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಗಲಭೆ ಪ್ರಕರಣದಲ್ಲಿ ಬಂಧಿತರ ಬಿಡುಗಡೆಗಾಗಿ ಮತ್ತೊಂದು ಹೋರಾಟಕ್ಕೆ ತಯಾರಿ ನಡೆಸಿರುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕೈದಿಗಳನ್ನು ರಾತ್ರೋರಾತ್ರಿ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಬಂಧಿತರ ಬಿಡುಗಡೆಗೆ ಆಗ್ರಹಿಸಿ ಕೆಲವು ಸಂಘಟನೆಗಳು ಹೋರಾಟಕ್ಕೆ ಮುಂದಾಗಿರುವ ಮಾಹಿತಿಗಳಿವೆ. ಹೀಗಾಗಿ ಏಕಾಏಕಿ ಆರೋಪಿಗಳನ್ನು ಕಲಬುರಗಿಯ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ರವಾನಿಸಲಾಯಿತು.

ಸುಮಾರು 88 ಜನರನ್ನು ಕಲಬುರಗಿ ಜೈಲಿಗೆ ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಆರೋಪಿಗಳನ್ನ ಸ್ಥಳಾಂತರಿಸಲಾಗಿದ್ದು, ಬಂಧಿತರೆಲ್ಲರಿಗೂ ಹುಬ್ಬಳ್ಳಿಯ 4ನೇ ಜೆಎಮ್ಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಪೊಲೀಸರು ಮತ್ತೆ 14 ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಇದೇ ವೇಳೆ, ಪೊಲೀಸ್ ವಾಹನದ ಮೇಲೆ ಹತ್ತಿದ್ದ ಮೌಲ್ವಿಯ ಪತ್ತೆಗೆ ಕಾರ್ಯಾಚರಣೆ ನಡೆದಿದೆ. ಅಲ್ಲದೆ, ಗಲಭೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಅಲ್ತಾಫ್ ಅಳ್ಳೂರ ಮಾಹಿತಿ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
The Karnataka Police have launched a hunt for a Maulvi for delivering hate speech and instigating a mob to indulge in large-scale violence after an objectionable post appeared on social media, police said on Tuesday.Maulvi Waseem went missing after finding out that the police are after him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am