ಬ್ರೇಕಿಂಗ್ ನ್ಯೂಸ್
24-09-20 02:33 pm Headline Karnataka News Network ಕರ್ನಾಟಕ
ಬೆಳಗಾವಿ, ಸೆಪ್ಟಂಬರ್ 23: ಕೊರೊನಾ ಸೋಂಕಿನಿಂದ ಮೃತಪಟ್ಟ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ದೆಹಲಿಯಲ್ಲೇ ನಡೆಯಲಿದೆ. ನಿಧನರಾದ ಬಳಿಕ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ದೇಹದಲ್ಲಿ ಸೋಂಕು ಇರುವುದು ದೃಢಪಟ್ಟಿದ್ದರಿಂದ ಶವ ಬಿಟ್ಟುಕೊಡಲು ಏಮ್ಸ್ ವೈದ್ಯರು ನಿರಾಕರಿಸಿದ್ದಾರೆ.
ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ದೆಹಲಿಯ ದ್ವಾರಕಾ ಸೆಕ್ಟರ್-24 ರಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಏಮ್ಸ್ ಆಸ್ಪತ್ರೆಯಲ್ಲೇ ಅಂತಿಮ ದರ್ಶನ ಮಾಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸುರೇಶ ಅಂಗಡಿ ಹಿರಿಯ ಪುತ್ರಿ ಡಾಕ್ಟರ್ ಶೃತಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪುತ್ರಿ, ಮೊಮ್ಮಗಳು ಹಾಗೂ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ವಿಧಿವಿಧಾನ ನೇರವೇರಿಸಲು ಲಿಂಗಾಯತ ಸ್ವಾಮೀಜಿ ಬಾಳಯ್ಯ ಕೂಡ ದೆಹಲಿಗೆ ತೆರಳಿದ್ದಾರೆ.

ಬೆಳಗಾವಿಯಲ್ಲಿ ಮಡುಗಟ್ಟಿದ ಶೋಕ..!
ಬೆಳಗಾವಿಯಲ್ಲಿ ಅಜಾತ ಶತ್ರು ಎಂದೇ ಕರೆಸಿಕೊಂಡಿದ್ದ ಸುರೇಶ್ ಅಂಗಡಿ ನಿಧನ ಇಡೀ ಜಿಲ್ಲೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಬಿಜೆಪಿ, ಕಾಂಗ್ರೆಸ್ ಪ್ರಮುಖರು, ಅವರ ಮನೆಗ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ದಿಢೀರ್ ಆಗಿ ತಮ್ಮನ್ನಗಲಿದ್ದನ್ನು ಅರಗಿಸಿಕೊಳ್ಳಲು ಆಗದೆ ಕುಟುಂಬಸ್ಥರು ತೀವ್ರ ದುಃಖತಪ್ತರಾಗಿದ್ದಾರೆ. ಅವರ ತಾಯಿ, ಪತ್ನಿ ಹಾಗೂ ಮಗಳು, ಸಂಬಂಧಿಕರೆಲ್ಲ ಕಣ್ಣೀರು ಹಾಕುತ್ತಿದ್ದಾರೆ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಇಡೀ ಕುಟುಂಬ ದುಃಖದಲ್ಲಿ ಮುಳುಗಿದೆ. ಸುರೇಶ್ ಅಂಗಡಿ ತಾಯಿ ಸೋಮವ್ವ ಅಂಗಡಿಯವರು ತೀವ್ರ ದುಃಖತಪ್ತರಾಗಿದ್ದು, ನನ್ನ ಮಗ ಬರ್ತಾನೆ, ಬಾಗಿಲು ತೆಗೀರಿ.. ಅವನಿಗೆ ಎನೂ ಆಗಿಲ್ಲ ಎಂದು ರೋದಿಸುತ್ತಿದ್ದಾರೆ. ಹಲವು ಸಂಬಂಧಿಕರು ಹಾಗೂ ಸ್ನೇಹಿತರು ಸಹ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಅವರ ಸಹೋದರಿ ಸಹ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಹ ಸುರೇಶ್ ಅಂಗಡಿ ನಿವಾಸದ ಬಳಿ ಸೇರಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am