ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು ; ಸಚಿವ ಸಂಪುಟದಲ್ಲಿ ನಿರ್ಣಯಿಸಿ ಕೇಂದ್ರಕ್ಕೆ ರವಾನೆ 

21-04-22 10:13 am       HK Desk news   ಕರ್ನಾಟಕ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಶಿವಮೊಗ್ಗ, ಎ.21: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟದ ತೀರ್ಮಾನವನ್ನು ಅನುಮತಿಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬುಧವಾರ ಸಂಜೆ ವಿಮಾನ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ವಿಮಾನ ನಿಲ್ದಾಣ ಆರಂಭಕ್ಕೂ ಮುನ್ನ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಲಿದೆ ಎಂದರು. 

CM inspects work on Shivamogga airport | Mysuru News - Times of India

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಉಡಾನ್ ಯೋಜನೆಯಡಿ ನಡೆಯಲಿದ್ದು, ನಾಮಕರಣ ವಿಚಾರದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅನುಮತಿ ಪಡೆಯಲಾಗುವುದು. ಮುಂದೆ ರಾತ್ರಿ ಲ್ಯಾಂಡಿಂಗ್ ಸೌಕರ್ಯವನ್ನೂ ಒದಗಿಸಲಾಗುವುದು ಎಂದರು. 

ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ.  ಜೊತೆಗೆ ಎಲ್ಲ ಕೆಲಸಗಳನ್ನು ಪೂರ್ಣ ಗೊಳಿಸಲಾಗುವುದು.  ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಕಾಮಗಾರಿ ನಿರ್ವಹಿಸಲಾಗಿದೆ. ಮುಂದೆ ಅಂತಾರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣವಾಗಲಿದೆ ಎಂದವರು ತಿಳಿಸಿದರು. 

Karnataka government on Wednesday decided to name Shivamogga airport after former chief minister and senior BJP leader BS Yediyurappa. Speaking to media, Chief Minister Bommai said the cabinet has decided to name Shivamogga airport after BSY as he played a major role in bringing the airport to the city. The proposal will now be forwarded to the Ministry of Civil Aviation.