ಬ್ರೇಕಿಂಗ್ ನ್ಯೂಸ್
21-04-22 05:24 pm HK Desk news ಕರ್ನಾಟಕ
ಬಾಗಲಕೋಟ, ಎ.21: ಸಚಿವ ಸಿಸಿ ಪಾಟೀಲರು ನನ್ನ ಬಗ್ಗೆ ಕೆಟ್ಟ ಪದ ಬಳಸಿ ಮಾತನಾಡಿದ್ದಾರೆ. ಪೂರ್ವಾಶ್ರಮದ ಬಗ್ಗೆ ತನಗೆ ಗೊತ್ತಿದೆ ಅಂದಿದ್ದಾರೆ. 5ನೇ ವರ್ಷದಲ್ಲೇ ಸನ್ಯಾಸ ಸ್ವೀಕಾರ ಮಾಡಿದ್ದೇನೆ. ಪೂರ್ವಾಶ್ರಮದ ಬಗ್ಗೆ ನನಗೇ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಸಚಿವ ಸಿ.ಸಿ ಪಾಟೀಲ್ ಮಾಲೀಕರಾಗಿದ್ದರೋ, ಜೀತದಾಳು ಆಗಿದ್ದರೋ ಸಮಾಜಕ್ಕೆ ಸ್ಪಷ್ಟ ಪಡಿಸಬೇಕು ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗರಂ ಆಗಿದ್ದಾರೆ.
ಮೂರು ಸಾವಿರ ಮಠದ ವಿಷಯ ಪ್ರಸ್ತಾಪ ಮಾಡಿದ್ದೀರಿ. ಮೂರು ಸಾವಿರ ಮಠದ ಪೀಠಕ್ಕಾಗಿ ರೌಡಿಸಂ ಮಾಡಿದ್ದೇನೆ ಎಂದಿದ್ದಾರೆ. ರೌಡಿಸಂ ಏನ್ ಮಾಡಿದ್ದೇನೆ, ಸಚಿವ ಸಿ ಸಿ ಪಾಟೀಲ್ ತೋರಿಸಬೇಕು. ಸಚಿವ ಸಿಸಿ ಪಾಟೀಲ್ ನನ್ನ ಮೇಲೆ ಮಾಡಿರೋ ಆರೋಪ ಸಾಬೀತು ಮಾಡಿದ್ರೆ ತಕ್ಷಣ ಎಲ್ಲ ಮಠಗಳ ಪೀಠ ತ್ಯಾಗ ಮಾಡ್ತೀನಿ. ಈ ಬಗ್ಗೆ ರಾಜ್ಯದ ಜನ್ರಿಗೆ ಸಚಿವ ಸಿ ಸಿ ಪಾಟೀಲ್ ಏಪ್ರಿಲ್ 27ರೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಏ.27 ರಂದು ಸಚಿವ ಸಿ ಸಿ ಪಾಟೀಲ್ ಮನೆ ಎದುರು ಸತ್ಯಾಗ್ರಹ ನಡೆಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ಇಲ್ಲದಿದ್ದರೆ ಸಚಿವರ ನರಗುಂದ ಪಟ್ಟಣದ ಮನೆ ಎದುರು ಸತ್ಯಾಗ್ರಹ ನಡೆಸುತ್ತೇವೆ. ನಮ್ಮನ್ನು ಪೂಜ್ಯರು ಅಂತ ಕರೆಯುವರು ಭಕ್ತರು. ಇವರೆಲ್ಲ ಅನಾಗರಿಕತೆ ಉಳ್ಳವರು ಅಲ್ಲ ಎಂದು ಸಿ ಸಿ ಪಾಟೀಲ್ ಗೆ ತಿರುಗೇಟು ನೀಡಿದರು. ನಿಮ್ಮ ಮಕ್ಕಳ ಮದುವೆಗೆ ಕರೆದು ಆಶೀರ್ವಾದ ಮಾಡಿಸಿದಾಗ, ನಮ್ಮ ಪೂರ್ವಾಶ್ರಮದ ಮಾಹಿತಿ, ರೌಡಿಸಂ ನಿಮಗೆ ಗೊತ್ತಿರಲಿಲ್ಲವೇ ಸಿ ಸಿ ಪಾಟೀಲರೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಠದ ಪರಂಪರೆಗೆ ಧಕ್ಕೆ ತರುವ ಕೆಲಸ ಮಾಡಿದ್ರೆ ಸಹಿಸಿಕೊಂಡು ಸುಮ್ಮನಿರಲ್ಲ. ಸ್ವಾಮಿಗಳು ಜಾಮೀನು ಮೇಲೆ ಇದ್ದಾರೆ ಎಂದಿದ್ದೀರಿ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿದಾಗ ಈ ರೀತಿ ಮಾಡೋದು ಸರೀನಾ. ನನ್ನ ನೈತಿಕತೆಯ ಬಗ್ಗೆ ಪ್ರಶ್ನೆ ಮಾಡಿದ್ದೀರಿ. ನಿಮ್ಮ ನೈತಿಕತೆಯ ಬಗ್ಗೆ ನನಗೆ ಬಹಳಷ್ಟು ಆಶ್ಚರ್ಯ ಆಗ್ತಿದೆ. ವಿಧಾನಸೌಧದಲ್ಲಿ ಅಧಿವೇಶನ ನಡೆದಾಗ ನೀವು ಮೊಬೈಲ್ ನಲ್ಲಿ ಏನ್ ನೋಡಿದ್ರಿ ಅನ್ನೋದು ಇಡೀ ಜಗತ್ತಿಗೆ ಗೊತ್ತಿದೆ. ಯಾವ ನೈತಿಕೆಯ ಹಿನ್ನೆಲೆಯಲ್ಲಿ ನೀವು ರಾಜೀನಾಮೆ ಕೊಟ್ರಿ ಅನ್ನೋದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಸಿಸಿ ಪಾಟೀಲ್ ಅಧಿವೇಶನದಲ್ಲಿ ಬ್ಲ್ಯೂ ಫಿಲ್ಮ್ ನೋಡಿದ್ದನ್ನು ಪ್ರಸ್ತಾಪಿಸದೆ ಸ್ವಾಮೀಜಿ ಕುಟುಕಿದರು.
ಕಮಿಷನ್ ಬಗ್ಗೆ ಮಾತಾಡಿದ್ದಕ್ಕೆ ಪೊಲೀಸರನ್ನು ಛೂಬಿಟ್ಟಿದ್ದೀರಿ..!
ಸರ್ಕಾರದ ಕಮಿಷನ್ ಬಗ್ಗೆ ಮಾತನಾಡಿದಕ್ಕೆ ಸರಕಾರ ನನ್ನ ಮೇಲೆ ಪೊಲೀಸರನ್ನ ಛೂಬಿಟ್ಟಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ ಶ್ರೀಗಳು, ಪೊಲೀಸರ ಮೂಲಕ ನನ್ನ ಮೇಲೆ ಇರೋ ಕೇಸ್ ಬಗ್ಗೆ ಮಾಹಿತಿ ಕಲೆ ಹಾಕ್ತಾಯಿದ್ದಾರೆ. ಪದೇ ಪದೇ ಬಾಲೆಹೊಸೂರ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿ ಭಕ್ತರಿಗೆ ಕಾಟ ಕೊಡುತ್ತಿದ್ದಾರೆ. ಪೊಲೀಸ್ ಇಲಾಖೆ ಯಾವುದಕ್ಕೆ ಬಳಸಿಕೊಳ್ಳುತ್ತಿದ್ದೀರಿ. ನನ್ನ ಹೆದರಿಸುವ ತಂತ್ರ ಮಾಡ್ತಾಯಿದ್ದೀರಿ. ಹೆದರುವ ಸ್ವಾಮಿ ನಾನಲ್ಲ. ನಾನು ಯಾವ ಕೇಸ್ ಮೇಲೆ ಜಾಮೀನಿನ ಮೇಲಿದ್ದೇನೆಂಬುದು ಜನಕ್ಕೆ ಗೊತ್ತು. ನಿಮ್ಮಂತ ಜನಪ್ರತಿನಿಧಿಗಳು ಕುತಂತ್ರದಿಂದ ನನ್ನನ್ನ ಕೇಸ್ ನಲ್ಲಿ ಸಿಲುಕಿಸುವ ಕೆಲಸ ಮಾಡಿದ್ದೀರಿ. ಭ್ರಷ್ಟಾಚಾರ ನಿಲ್ಲಬೇಕು ಅಂತ ಮಾತನಾಡಿದ್ದಕ್ಕೆ ನನ್ನ ವೈಯಕ್ತಿಕ ವಿಚಾರಗಳಿಗೆ ನೀವು ಕೈಹಾಕಿದ್ದೀರಿ. ನಿಮ್ಮ ಅಧಿಕಾರ ಬಳಸಿಕೊಂಡು ಹುಚ್ಚು ಸಾಹಸ ಮಾಡಿ ನನ್ನ ಎದುರಿಸುತ್ತೀರೆಂದರೆ, ಅದನ್ನ ನಾನು ಸ್ವಾಗತಿಸುತ್ತೇನೆಂದು ಸವಾಲು ಹಾಕಿದರು.
Speaking at a press conference at the Balehosura Math, Dingaleswara Sreesanth said , "The award we have given to Tondadarya Lingayak Siddhalinga Sri Sri has not been opposed. Audrey said in her name, there should be no celebration of Vedic day. That should be understood by Minister Sisi Patil. CC Patil's claim that Dingaleswara is not tolerated is not correct.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm