ಬ್ರೇಕಿಂಗ್ ನ್ಯೂಸ್
22-04-22 01:41 pm HK Desk news ಕರ್ನಾಟಕ
ರಾಯಚೂರು, ಎ.22 : ಕೆಜಿ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲೇ ಹುಬ್ಬಳ್ಳಿಯಲ್ಲಿ ಗಲಭೆ ನಡೆಸಲು ಸಂಚು ಹೂಡಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದ್ದು ಪೊಲೀಸರೇ ಮಾಹಿತಿ ಕೊಟ್ಟಿದ್ದಾರೆ. ಘಟನೆ ಕುರಿತು ಎನ್ಐಎ ತನಿಖೆ ನಡೆಸುವ ಅಗತ್ಯವಿದೆಯೇ ಎಂಬ ಬಗ್ಗೆ ರಾಜ್ಯದ ಪೊಲೀಸರು, ಲಾ ಎನ್ಫೋರ್ಸಿಂಗ್ ಏಜೆನ್ಸಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.
ಇದೇ ರೀತಿ ಎಲ್ಲೆಲ್ಲಿ ಗಲಭೆಯ ಸಂಚು ನಡೆದಿದೆಯೋ ಅನ್ನುವುದರ ಬಗ್ಗೆ ತನಿಖೆ ನಡೀತಿದೆ. ಹುಬ್ಬಳ್ಳಿ ಘಟನೆಗೆ ಅಲ್ಲಿನದೇ ಪ್ರಾರ್ಥನಾ ಮಂದಿರದಲ್ಲಿ ಸಂಚು ನಡೆದಿತ್ತು ಎನ್ನಲಾಗಿದೆ. ಆ ಬಗ್ಗೆ ಸತ್ಯ ಹೊರತೆಗೆದು ಅತ್ಯಂತ ಕಠೋರ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೀತಿದೆ. ಗಲಭೆ ಕ್ಲಿಪ್ಪಿಂಗ್ಸ್ ಆಧಾರದಲ್ಲಿ ಗಲಭೆಯ ಮಾಸ್ಟರ್ ಮೈಂಡ್ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರನ್ನು ಕಲ್ಲು ಚಪ್ಪಡಿ ಹಾಕಿ ಕೊಂದು ಹಾಕುವ ಪ್ರಯತ್ನ ನಡೆದಿತ್ತು.
ಈಗ ಒಬ್ಬ ಮಾಸ್ಟರ್ ಮೈಂಡ್ ಸಿಕ್ಕಿದ್ದಾನೆ. ಇಂತಹ ಇನ್ನೂ ಎಷ್ಟೆಷ್ಟು ಮಾಸ್ಟರ್ ಮೈಂಡ್ ಗಳು ಇದ್ದಾರೋ, ಎಲ್ಲವನ್ನೂ ತನಿಖೆಯಿಂದ ಹೊರ ತೆಗೆಯುತ್ತೇವೆ ಎಂದರು ಜೋಷಿ.

ಗಲಭೆಯಿಂದ ಯಾರಿಗೆ ಲಾಭ, ನಷ್ಟ ಎಂದು ಯಾರೂ ಮಾತನಾಡಬಾರದು. ಗಲಭೆ ಎಬ್ಬಿಸಿದೋರು ಸಮಾಜದ್ರೋಹಿ ಶಕ್ತಿಗಳು. ಎಲ್ಲ ಮುಸಲ್ಮಾನರು ಅನ್ನುತ್ತಿಲ್ಲ, ಕೆಲ ಮತಾಂಧ ಮುಸಲ್ಮಾನರು ಕೃತ್ಯ ಮಾಡಿದ್ದಾರೆ. ಅಂಥವರನ್ನು ಪೊಲೀಸರು ಬಂಧಿಸಿದಾಗ ಯಾಕೆ ಕಾಂಗ್ರೆಸ್, ಜೆಡಿಎಸ್ ಮಂದಿ ಸಪೋರ್ಟ್ ಮಾಡ್ತಾರೆ ಎನ್ನೋದು ಗೊತ್ತಾಗಲ್ಲ.
ಹುಬ್ಬಳ್ಳಿ ಆಗ ಬಹಳ ಸೆನ್ಸಿಟಿವ್ ಇತ್ತು. ಆದರೆ ಕಳೆದ 20 ವರ್ಷದಿಂದ ಹುಬ್ಬಳ್ಳಿ ಶಾಂತವಾಗಿದೆ. ಲಾಭ ನಷ್ಟದ ಲೆಕ್ಕ ಹಾಕೋದನ್ನು ಕಾಂಗ್ರೆಸ್ ಬಂದ್ ಮಾಡ್ಲಿ. ತುಷ್ಟೀಕರಣ ಪಾಲಿಸಿಯಿಂದ ದೇಶ, ರಾಜ್ಯ ಈ ಸ್ಥಿತಿಗೆ ಬಂದಿದೆ. ಇನ್ನಾದ್ರೂ ಇಂಥಹದ್ದನ್ನು ಬಿಡಿ ಎಂದು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು.
Pralhad Joshi talks about Hubli riots says will think about NIA investigating.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm