ಕೊರೊನಾಗೆ ಮತ್ತೊಬ್ಬ ಶಾಸಕ ಬಲಿ, ಬಿ. ನಾರಾಯಣ ರಾವ್ ವಿಧಿವಶ !

24-09-20 04:29 pm       Bangalore Correspondent   ಕರ್ನಾಟಕ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಬೀದರ್ ಮೂಲದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬೆಂಗಳೂರು, ಸೆಪ್ಟಂಬರ್ 24: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಬೀದರ್ ಮೂಲದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಾರಾಯಣ ರಾವ್, ಕೊರೊನಾ ಸೋಂಕಿಗೆ ಒಳಗಾಗಿ ಸೆಪ್ಟಂಬರ್ 1ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆಯಷ್ಟೆ ಮಣಿಪಾಲದ ವೈದ್ಯರು, ನಾರಾಯಣ ರಾವ್ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದರು. ನಾರಾಯಣ ರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಒಬ್ಬರಾಗಿದ್ದರು.  

ನಿನ್ನೆಯಷ್ಟೇ ಬೆಳಗಾವಿ ಸಂಸದ, ಕೇಂದ್ರ ಸಚಿವ ಸುರೇಶ್ ಅಂಗಡಿ, ಕೊರೊನಾ ಸೋಂಕಿನಿಂದ ಅಸುನೀಗಿದ್ದರು. ವಾರದ ಹಿಂದೆ ಬಿಜೆಪಿ ರಾಜ್ಯಸಭಾ ಸದಸ್ಯ ರಾಯಚೂರು ಮೂಲದ ಅಶೋಕ್ ಗಸ್ತಿ ಕೊರೊನಾಗೆ ಬಲಿಯಾಗಿದ್ದರು. ಒಂದೇ ವಾರದಲ್ಲಿ ಮೂವರು ಜನಪ್ರತಿನಿಧಿಗಳು ಕೊರೊನಾ ಸೋಂಕಿಗೆ ಬಲಿಯಾದಂತಾಗಿದೆ.

Join our WhatsApp group for latest news updates (2)