ಬ್ರೇಕಿಂಗ್ ನ್ಯೂಸ್
27-04-22 10:56 am Bengaluru Correspondent ಕರ್ನಾಟಕ
ಬೆಂಗಳೂರು, ಎ.27: ಗೃಹ ಇಲಾಖೆಯಲ್ಲಿ ಮೇಜರ್ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರವು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಚುನಾವಣೆ ಮುಂದಿಟ್ಟುಕೊಂಡು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲು ನಿರ್ಧರಿಸಿದೆ.
ಪ್ರಮುಖವಾಗಿ ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಅವಧಿ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹೊಸ ಆಯುಕ್ತರ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೇರಲು ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹುದ್ದೆಯಲ್ಲಿ 20 ತಿಂಗಳು ಪೂರೈಸಿದ್ದು ಅವರಿಂದ ತೆರವಾಗುವ ಸ್ಥಾನಕ್ಕಾಗಿ ಅಧಿಕಾರಿಗಳು ಲಾಬಿ ನಡೆಸಿದ್ದಾರೆ. ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಗುಪ್ತಚರ ದಳ ಮುಖ್ಯಸ್ಥ ಬಿ.ದಯಾನಂದ್ ಹೆಸರು ಬೆಂಗಳೂರು ಆಯುಕ್ತರ ಸ್ಥಾನಕ್ಕೆ ಮುಂಚೂಣಿಯಲ್ಲಿದೆ. ಅಲ್ಲದೆ, ಆಯಕಟ್ಟಿನ ಹುದ್ದೆ ಪಡೆಯಲು ಐಪಿಎಸ್ ಅಧಿಕಾರಿಗಳು ತಮ್ಮ ಪರಿಚಿತ ರಾಜಕಾರಣಿಗಳ ಮುಖಾಂತರ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಕಮಿಷನರ್ ಆಗಿರುವ ಶಶಿಕುಮಾರ್, ಮೈಸೂರಿಗೆ ವರ್ಗಾವಣೆ ಬಯಸಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕಾಗಿ ತೆರೆಮರೆಯಲ್ಲಿ ಆಪ್ತರ ಮೂಲಕ ಲಾಬಿ ನಡೆಸಿದ್ದಾರೆ.

ಮಂಗಳೂರು ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತರು ಒಂದು ವರ್ಷ ಪೂರೈಸಿದ್ದಾರೆ. ಕನಿಷ್ಠ ಒಂದು ವರ್ಷ ಪೂರೈಸಿದ ಕಮಿಷನರ್, ಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅವಕಾಶ ಇದೆ. ಹೀಗಾಗಿ, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಅಳೆದು ತೂಗಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಬೆಂಗಳೂರು ನಗರ ಒಳಗೊಂಡಂತೆ ವಿವಿಧ ವಲಯಗಳ ಎಸಿಪಿ, ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಗಳ ವರ್ಗಾವಣೆಗೂ ಸರ್ಕಾರ ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. ಪೂರ್ವ ವಲಯದಲ್ಲಿ ಐಜಿಪಿ ಹುದ್ದೆಯೂ ಖಾಲಿಯಿದ್ದು ಅದನ್ನು ತುಂಬುವುದಕ್ಕೂ ಸರಕಾರ ಮುಂದಾಗಿದೆ.
Bangalore, Mangaluru and Mysuru Police commissioner to transfer soon as major surgery is plan is all ready by the Home Ministry department.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm