ಬ್ರೇಕಿಂಗ್ ನ್ಯೂಸ್
29-04-22 01:33 pm Bengalore Correspondnt ಕರ್ನಾಟಕ
ಬೆಂಗಳೂರು, ಎ.29: ಪಿಎಸ್ಐ ನೇಮಕಾತಿ ಹಗರಣದ ಕಿಂಗ್ಪಿನ್ ಎನ್ನಲಾದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ಕಲಬುರ್ಗಿ ಜಿಲ್ಲೆಯ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಪೂರ್ತಿ ರದ್ದುಗೊಳಿಸಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇದೇ ವೇಳೆ, ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಯಾರೇ ಇರಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ತೀವಿ. ಅವರನ್ನು ಹೆಡೆಮುರಿ ಕಟ್ತೀವಿ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಒಟ್ಟು 54,289 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಅಕ್ರಮದಲ್ಲಿ ಆಪಾದಿತರು ಎಂದು ಪರಿಗಣಿಸಲ್ಪಟ್ಟವರನ್ನು ಬಿಟ್ಟು , ಉಳಿದವರಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪಗಳ ಕುರಿತು ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ಪಿಎಸ್ಐ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಉಪಕರಣಗಳನ್ನು ಬಳಸಿ ಸಹಾಯ ಮಾಡುತ್ತಿದ್ದ ಅಕ್ರಮ ಕೂಟದ ಮೇಲೆ ದಾಳಿ ನಡೆಸಿ ಹಲವರನ್ನು ಬಂಧಿಸಲಾಗಿದೆ ಎಂದಿದ್ದರು. ಆದರೆ ಸಚಿವರು ಹೇಳಿದಂತೆ ಅ.3, 2021ರಂದು ನಡೆದ ಪಿಎಸ್ಐ ಲಿಖಿತ ಪರೀಕ್ಷೆ ವೇಳೆ ಯಾವುದೇ ದಾಳಿ ನಡೆದಿರಲಿಲ್ಲ. ಬದಲಾಗಿ ಅ.24ರಂದು ನಡೆದ ಕಾನ್ಸ್ಟೇಬಲ್ ಪರೀಕ್ಷೆಯ ಮುನ್ನಾದಿನ (ಅ.23, 2021) ಕಲಬುರಗಿ ಹಾಗೂ ಬೆಳಗಾವಿ ವಿಭಾಗದಲ್ಲಿ ದಾಳಿ ನಡೆದಿತ್ತು. ಎಲೆಕ್ಟ್ರಾನಿಕ್ ಸಾಧನ, ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ನಕಲು ಮಾಡುವ ಯತ್ನಕ್ಕಿಳಿದಿದ್ದ 9 ಜನರನ್ನು ಕಲಬುರಗಿಯಲ್ಲಿ ಪೊಲೀಸರು ಬಂಧಿಸಿದ್ದರು. ಲಾಡ್ಜ್ವೊಂದರಲ್ಲಿ ತಂಗಿದ್ದ ಇವರ ಮೇಲೆ ದಾಳಿ ನಡೆಸಿದಾಗ, ಬ್ಲೂಟೂತ್ ಡಿವೈಸ್, ಮೈಕ್ರೋಫೋನ್ ಮತ್ತು ಸಿಮ್ ಕಾರ್ಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸದನದಲ್ಲಿ ಉತ್ತರಿಸುವಾಗ ಗೃಹಸಚಿವರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ವಾಸ್ತವಾಂಶದ ಮಾಹಿತಿ ನೀಡದೆ ದಾರಿ ತಪ್ಪಿಸುವ ಯತ್ನ ನಡೆಸಿದ್ದರು ಎಂಬಿತ್ಯಾದಿ ಮಾತುಗಳು ಕೇಳಿ ಬಂದಿದ್ದವು. ಆನಂತರ ಪ್ರಕರಣ ಸಿಐಡಿಗೆ ಒಪ್ಪಿಸಿ ಆರೋಪಿಗಳ ಬಂಧನ ಆಗುತ್ತಲೇ ಹಗರಣ ಬಯಲಿಗೆ ಬಂದಿತ್ತು.
The state government has announced a major decision to cancel the PSI recruitment process in Calabargi district following the arrest of BJP leader Divya Sargari, the Kingpin of the PSI recruitment scandal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm