ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm