ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 07:56 pm
HK News Staffer
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am