ಬ್ರೇಕಿಂಗ್ ನ್ಯೂಸ್
02-05-22 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಸಚಿವರ ತಮ್ಮನೇ ಅಭ್ಯರ್ಥಿಯೊಬ್ಬನಿಂದ 80 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಐಡಿ ತನಿಖೆಯ ವೇಳೆ ಅಭ್ಯರ್ಥಿಯೇ ಈ ಬಗ್ಗೆ ಮಾಹಿತಿ ನೀಡಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಕ್ರಮದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವರೊಬ್ಬರ ಹೆಸರು ಕೇಳಿಬಂದಿದೆ ಎಂದು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಆ ಮಂತ್ರಿ ಅಥವಾ ಅವರ ತಮ್ಮ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲ್ಲ. ಅವರ ಸಂಬಂಧಿಕರು ಭಾಗಿಯಾಗಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆ ಸಚಿವರು ಸಿಎಂ ರೇಸ್ ನಲ್ಲಿದ್ದಾರೆ. ಅವರು ಸಿಎಂ ರೇಸ್ ನಲ್ಲಿರುವುದರಿಂದ ಅವರ ಹೆಸರನ್ನು ಬಹಿರಂಗವಾಗಿ ಹೇಳದಂತೆ ಕೆಲವರು ನನ್ನ ಬಳಿ ಹೇಳಿದ್ದಾರೆ. ಆದರೆ ಆ ಸಚಿವರು ಸಿಐಡಿ ತನಿಖೆಗೆ ಮುಂದಾದಾಗ ಸ್ವತಃ ಕರೆ ಮಾಡಿ ತನಿಖೆ ನಡೆಸದಂತೆ ಅಧಿಕಾರಿಗಳಿಗೆ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬದ್ಧತೆ ಇದ್ದರೆ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶ ನೀಡಲಿ ಎಂದು ಆಗ್ರಹಿಸಿದರು.
![]()
ಇದು ಸಿಎಂ ಬಸವರಾಜ್ ಬೊಮ್ಮಾಯಿ ಕಾಲದಲ್ಲಾದ ಅಕ್ರಮವಲ್ಲ. ಅಥವಾ ಸಿಎಂ ಬೊಮ್ಮಾಯಿ ಅವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಲ. ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಕೂಡ ಆಗಿದೆ. ಮಾಹಿತಿ ಪ್ರಕಾರ ಮಾಗಡಿಯ ಮೂವರು ಅಭ್ಯರ್ಥಿಗಳು ಇದ್ದಾರೆ. ಪೋಸ್ಟಿಂಗ್ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆಯೇ ? ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
![]()
ರಾಮನಗರದ ಉಸ್ತುವಾರಿ ಸಚಿವರು ನಮಗೆ ಗಂಡಸ್ತನದ ಪ್ರಶ್ನೆ ಮಾಡಿದ್ದರು. ಸಿಎಂ ಬೊಮ್ಮಾಯಿ ಎದುರಲ್ಲೇ ಇಂತಹ ಮಾತುಗಳನ್ನು ಆಡಿದ್ದರು. ನಾವ್ಯಾರು ಗಂಡಸರಲ್ಲ, ಆ ಸಚಿವರೊಬ್ಬರೇ ಗಂಡಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಅವರ ಗಂಡಸ್ತನ ನೋಡಿ ಗಡ ಗಡ ನಡುಗುತ್ತಿದ್ದೇವೆ. ತಾಕತ್ತಿರುವ ಸಚಿವರು ಪಿಎಸ್ಐ ಅಕ್ರಮ ತನಿಖೆ ವಿಚಾರದಲ್ಲಿ ತಾಕತ್ತು ತೋರಿಸಲಿ ಎಂದು ಸಚಿವ ಅಶ್ವತ್ಥನಾರಾಯಣ ಹೆಸರು ಹೇಳದೆಯೇ ಡಿಕೆಶಿ ಸವಾಲು ಹಾಕಿದ್ದಾರೆ.
Karnataka PSI Exam scam, Minister Ashwath Narayan name has been revealed during the enquiry. Minister dr ashwath narayan rejects to talk about allegations of ugrappa
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 07:56 pm
HK News Staffer
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am