ಬ್ರೇಕಿಂಗ್ ನ್ಯೂಸ್
02-05-22 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಸಚಿವರ ತಮ್ಮನೇ ಅಭ್ಯರ್ಥಿಯೊಬ್ಬನಿಂದ 80 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಐಡಿ ತನಿಖೆಯ ವೇಳೆ ಅಭ್ಯರ್ಥಿಯೇ ಈ ಬಗ್ಗೆ ಮಾಹಿತಿ ನೀಡಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಕ್ರಮದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವರೊಬ್ಬರ ಹೆಸರು ಕೇಳಿಬಂದಿದೆ ಎಂದು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಆ ಮಂತ್ರಿ ಅಥವಾ ಅವರ ತಮ್ಮ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲ್ಲ. ಅವರ ಸಂಬಂಧಿಕರು ಭಾಗಿಯಾಗಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆ ಸಚಿವರು ಸಿಎಂ ರೇಸ್ ನಲ್ಲಿದ್ದಾರೆ. ಅವರು ಸಿಎಂ ರೇಸ್ ನಲ್ಲಿರುವುದರಿಂದ ಅವರ ಹೆಸರನ್ನು ಬಹಿರಂಗವಾಗಿ ಹೇಳದಂತೆ ಕೆಲವರು ನನ್ನ ಬಳಿ ಹೇಳಿದ್ದಾರೆ. ಆದರೆ ಆ ಸಚಿವರು ಸಿಐಡಿ ತನಿಖೆಗೆ ಮುಂದಾದಾಗ ಸ್ವತಃ ಕರೆ ಮಾಡಿ ತನಿಖೆ ನಡೆಸದಂತೆ ಅಧಿಕಾರಿಗಳಿಗೆ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬದ್ಧತೆ ಇದ್ದರೆ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶ ನೀಡಲಿ ಎಂದು ಆಗ್ರಹಿಸಿದರು.
![]()
ಇದು ಸಿಎಂ ಬಸವರಾಜ್ ಬೊಮ್ಮಾಯಿ ಕಾಲದಲ್ಲಾದ ಅಕ್ರಮವಲ್ಲ. ಅಥವಾ ಸಿಎಂ ಬೊಮ್ಮಾಯಿ ಅವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಲ. ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಕೂಡ ಆಗಿದೆ. ಮಾಹಿತಿ ಪ್ರಕಾರ ಮಾಗಡಿಯ ಮೂವರು ಅಭ್ಯರ್ಥಿಗಳು ಇದ್ದಾರೆ. ಪೋಸ್ಟಿಂಗ್ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆಯೇ ? ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
![]()
ರಾಮನಗರದ ಉಸ್ತುವಾರಿ ಸಚಿವರು ನಮಗೆ ಗಂಡಸ್ತನದ ಪ್ರಶ್ನೆ ಮಾಡಿದ್ದರು. ಸಿಎಂ ಬೊಮ್ಮಾಯಿ ಎದುರಲ್ಲೇ ಇಂತಹ ಮಾತುಗಳನ್ನು ಆಡಿದ್ದರು. ನಾವ್ಯಾರು ಗಂಡಸರಲ್ಲ, ಆ ಸಚಿವರೊಬ್ಬರೇ ಗಂಡಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಅವರ ಗಂಡಸ್ತನ ನೋಡಿ ಗಡ ಗಡ ನಡುಗುತ್ತಿದ್ದೇವೆ. ತಾಕತ್ತಿರುವ ಸಚಿವರು ಪಿಎಸ್ಐ ಅಕ್ರಮ ತನಿಖೆ ವಿಚಾರದಲ್ಲಿ ತಾಕತ್ತು ತೋರಿಸಲಿ ಎಂದು ಸಚಿವ ಅಶ್ವತ್ಥನಾರಾಯಣ ಹೆಸರು ಹೇಳದೆಯೇ ಡಿಕೆಶಿ ಸವಾಲು ಹಾಕಿದ್ದಾರೆ.
Karnataka PSI Exam scam, Minister Ashwath Narayan name has been revealed during the enquiry. Minister dr ashwath narayan rejects to talk about allegations of ugrappa
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm