ಬ್ರೇಕಿಂಗ್ ನ್ಯೂಸ್
02-05-22 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಸಚಿವರ ತಮ್ಮನೇ ಅಭ್ಯರ್ಥಿಯೊಬ್ಬನಿಂದ 80 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಐಡಿ ತನಿಖೆಯ ವೇಳೆ ಅಭ್ಯರ್ಥಿಯೇ ಈ ಬಗ್ಗೆ ಮಾಹಿತಿ ನೀಡಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಕ್ರಮದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವರೊಬ್ಬರ ಹೆಸರು ಕೇಳಿಬಂದಿದೆ ಎಂದು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಆ ಮಂತ್ರಿ ಅಥವಾ ಅವರ ತಮ್ಮ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲ್ಲ. ಅವರ ಸಂಬಂಧಿಕರು ಭಾಗಿಯಾಗಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆ ಸಚಿವರು ಸಿಎಂ ರೇಸ್ ನಲ್ಲಿದ್ದಾರೆ. ಅವರು ಸಿಎಂ ರೇಸ್ ನಲ್ಲಿರುವುದರಿಂದ ಅವರ ಹೆಸರನ್ನು ಬಹಿರಂಗವಾಗಿ ಹೇಳದಂತೆ ಕೆಲವರು ನನ್ನ ಬಳಿ ಹೇಳಿದ್ದಾರೆ. ಆದರೆ ಆ ಸಚಿವರು ಸಿಐಡಿ ತನಿಖೆಗೆ ಮುಂದಾದಾಗ ಸ್ವತಃ ಕರೆ ಮಾಡಿ ತನಿಖೆ ನಡೆಸದಂತೆ ಅಧಿಕಾರಿಗಳಿಗೆ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬದ್ಧತೆ ಇದ್ದರೆ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶ ನೀಡಲಿ ಎಂದು ಆಗ್ರಹಿಸಿದರು.
![]()
ಇದು ಸಿಎಂ ಬಸವರಾಜ್ ಬೊಮ್ಮಾಯಿ ಕಾಲದಲ್ಲಾದ ಅಕ್ರಮವಲ್ಲ. ಅಥವಾ ಸಿಎಂ ಬೊಮ್ಮಾಯಿ ಅವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಲ. ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಕೂಡ ಆಗಿದೆ. ಮಾಹಿತಿ ಪ್ರಕಾರ ಮಾಗಡಿಯ ಮೂವರು ಅಭ್ಯರ್ಥಿಗಳು ಇದ್ದಾರೆ. ಪೋಸ್ಟಿಂಗ್ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆಯೇ ? ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
![]()
ರಾಮನಗರದ ಉಸ್ತುವಾರಿ ಸಚಿವರು ನಮಗೆ ಗಂಡಸ್ತನದ ಪ್ರಶ್ನೆ ಮಾಡಿದ್ದರು. ಸಿಎಂ ಬೊಮ್ಮಾಯಿ ಎದುರಲ್ಲೇ ಇಂತಹ ಮಾತುಗಳನ್ನು ಆಡಿದ್ದರು. ನಾವ್ಯಾರು ಗಂಡಸರಲ್ಲ, ಆ ಸಚಿವರೊಬ್ಬರೇ ಗಂಡಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಅವರ ಗಂಡಸ್ತನ ನೋಡಿ ಗಡ ಗಡ ನಡುಗುತ್ತಿದ್ದೇವೆ. ತಾಕತ್ತಿರುವ ಸಚಿವರು ಪಿಎಸ್ಐ ಅಕ್ರಮ ತನಿಖೆ ವಿಚಾರದಲ್ಲಿ ತಾಕತ್ತು ತೋರಿಸಲಿ ಎಂದು ಸಚಿವ ಅಶ್ವತ್ಥನಾರಾಯಣ ಹೆಸರು ಹೇಳದೆಯೇ ಡಿಕೆಶಿ ಸವಾಲು ಹಾಕಿದ್ದಾರೆ.
Karnataka PSI Exam scam, Minister Ashwath Narayan name has been revealed during the enquiry. Minister dr ashwath narayan rejects to talk about allegations of ugrappa
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm