ಬ್ರೇಕಿಂಗ್ ನ್ಯೂಸ್
02-05-22 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಸಚಿವರ ತಮ್ಮನೇ ಅಭ್ಯರ್ಥಿಯೊಬ್ಬನಿಂದ 80 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಐಡಿ ತನಿಖೆಯ ವೇಳೆ ಅಭ್ಯರ್ಥಿಯೇ ಈ ಬಗ್ಗೆ ಮಾಹಿತಿ ನೀಡಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಕ್ರಮದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವರೊಬ್ಬರ ಹೆಸರು ಕೇಳಿಬಂದಿದೆ ಎಂದು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಆ ಮಂತ್ರಿ ಅಥವಾ ಅವರ ತಮ್ಮ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲ್ಲ. ಅವರ ಸಂಬಂಧಿಕರು ಭಾಗಿಯಾಗಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆ ಸಚಿವರು ಸಿಎಂ ರೇಸ್ ನಲ್ಲಿದ್ದಾರೆ. ಅವರು ಸಿಎಂ ರೇಸ್ ನಲ್ಲಿರುವುದರಿಂದ ಅವರ ಹೆಸರನ್ನು ಬಹಿರಂಗವಾಗಿ ಹೇಳದಂತೆ ಕೆಲವರು ನನ್ನ ಬಳಿ ಹೇಳಿದ್ದಾರೆ. ಆದರೆ ಆ ಸಚಿವರು ಸಿಐಡಿ ತನಿಖೆಗೆ ಮುಂದಾದಾಗ ಸ್ವತಃ ಕರೆ ಮಾಡಿ ತನಿಖೆ ನಡೆಸದಂತೆ ಅಧಿಕಾರಿಗಳಿಗೆ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬದ್ಧತೆ ಇದ್ದರೆ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶ ನೀಡಲಿ ಎಂದು ಆಗ್ರಹಿಸಿದರು.
![]()
ಇದು ಸಿಎಂ ಬಸವರಾಜ್ ಬೊಮ್ಮಾಯಿ ಕಾಲದಲ್ಲಾದ ಅಕ್ರಮವಲ್ಲ. ಅಥವಾ ಸಿಎಂ ಬೊಮ್ಮಾಯಿ ಅವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಲ. ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಕೂಡ ಆಗಿದೆ. ಮಾಹಿತಿ ಪ್ರಕಾರ ಮಾಗಡಿಯ ಮೂವರು ಅಭ್ಯರ್ಥಿಗಳು ಇದ್ದಾರೆ. ಪೋಸ್ಟಿಂಗ್ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆಯೇ ? ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
![]()
ರಾಮನಗರದ ಉಸ್ತುವಾರಿ ಸಚಿವರು ನಮಗೆ ಗಂಡಸ್ತನದ ಪ್ರಶ್ನೆ ಮಾಡಿದ್ದರು. ಸಿಎಂ ಬೊಮ್ಮಾಯಿ ಎದುರಲ್ಲೇ ಇಂತಹ ಮಾತುಗಳನ್ನು ಆಡಿದ್ದರು. ನಾವ್ಯಾರು ಗಂಡಸರಲ್ಲ, ಆ ಸಚಿವರೊಬ್ಬರೇ ಗಂಡಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಅವರ ಗಂಡಸ್ತನ ನೋಡಿ ಗಡ ಗಡ ನಡುಗುತ್ತಿದ್ದೇವೆ. ತಾಕತ್ತಿರುವ ಸಚಿವರು ಪಿಎಸ್ಐ ಅಕ್ರಮ ತನಿಖೆ ವಿಚಾರದಲ್ಲಿ ತಾಕತ್ತು ತೋರಿಸಲಿ ಎಂದು ಸಚಿವ ಅಶ್ವತ್ಥನಾರಾಯಣ ಹೆಸರು ಹೇಳದೆಯೇ ಡಿಕೆಶಿ ಸವಾಲು ಹಾಕಿದ್ದಾರೆ.
Karnataka PSI Exam scam, Minister Ashwath Narayan name has been revealed during the enquiry. Minister dr ashwath narayan rejects to talk about allegations of ugrappa
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am