ಬ್ರೇಕಿಂಗ್ ನ್ಯೂಸ್
03-05-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 3 : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯಲ್ಲಿ 4,000 ಕೆ.ಜಿ. ತೂಕದ ಖಡ್ಗ ಪ್ರಮುಖ ಆಕರ್ಷಣೆಯಾಗಲಿದ್ದು ಖಡ್ಗವನ್ನು ದೆಹಲಿಯ ನೋಯ್ಡಾದಲ್ಲಿ ತಯಾರಿಸಿ ಬೆಂಗಳೂರಿಗೆ ತರಲಾಗಿದೆ.
ಸೋಮವಾರ ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಎನ್. ಅಶ್ವತ್ಥ ನಾರಾಯಣ ಬರಮಾಡಿಕೊಂಡರು. ಈ ವೇಳೆ ಸಚಿವರ ನೇತೃತ್ವದಲ್ಲಿ ಪುರೋಹಿತರು ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆ ಎತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯ್ಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತಾರ್ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು.
ಕೆಂಪೇಗೌಡರ ಕೈಯಲ್ಲಿ 4000 ಕೆಜಿ ತೂಕದ ಖಡ್ಗ !

ರಾಜಧಾನಿ ಬೆಂಗಳೂರು ತಲುಪಿದ ಕೆಂಪೇಗೌಡರ ಪ್ರತಿಮೆಯ 4000 ಕೆಜಿ ತೂಕದ ಖಡ್ಗಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶಕ್ತಿಪೂಜೆಯನ್ನು ನೆರವೇರಿಸಿದರು. "ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಖಡ್ಗವು ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಲಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬರು ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟದಿಂದ ಒಂದು ದಿವ್ಯ ಅನುಭೂತಿಯನ್ನು ಪಡೆದುಕೊಳ್ಳುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ," ಎಂದು ಸಚಿವ ಅಶ್ವತ್ಥ ನಾರಾಯಣ ಬಣ್ಣಿಸಿದರು.
ಈ ಸಂದರ್ಭದಲ್ಲಿ ಅಮೆರಿಕದ ಅಕ್ಕ' ಕನ್ನಡ ಕೂಟಗಳ ಮುಖ್ಯಸ್ಥ ಡಾ. ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.
The 4,000-foot tall bronze statue of Kempegowder, a 108-foot tall statue, will be installed at Kempegowda International Airport near Devanahalli. The weight sword has reached Bangalore from Delhi.The sword, which came in a special truck, was handed over to Higher Education Minister Dr. C.N. Ashwaththa Narayana arrived on Monday. On this occasion, the priests, led by the minister, performed the traditional Shakti pooja for the sword. He also congratulated all the workers who were actively involved in the work.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm