ಬ್ರೇಕಿಂಗ್ ನ್ಯೂಸ್
03-05-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 3 : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯಲ್ಲಿ 4,000 ಕೆ.ಜಿ. ತೂಕದ ಖಡ್ಗ ಪ್ರಮುಖ ಆಕರ್ಷಣೆಯಾಗಲಿದ್ದು ಖಡ್ಗವನ್ನು ದೆಹಲಿಯ ನೋಯ್ಡಾದಲ್ಲಿ ತಯಾರಿಸಿ ಬೆಂಗಳೂರಿಗೆ ತರಲಾಗಿದೆ.
ಸೋಮವಾರ ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಎನ್. ಅಶ್ವತ್ಥ ನಾರಾಯಣ ಬರಮಾಡಿಕೊಂಡರು. ಈ ವೇಳೆ ಸಚಿವರ ನೇತೃತ್ವದಲ್ಲಿ ಪುರೋಹಿತರು ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆ ಎತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯ್ಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತಾರ್ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು.
ಕೆಂಪೇಗೌಡರ ಕೈಯಲ್ಲಿ 4000 ಕೆಜಿ ತೂಕದ ಖಡ್ಗ !

ರಾಜಧಾನಿ ಬೆಂಗಳೂರು ತಲುಪಿದ ಕೆಂಪೇಗೌಡರ ಪ್ರತಿಮೆಯ 4000 ಕೆಜಿ ತೂಕದ ಖಡ್ಗಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶಕ್ತಿಪೂಜೆಯನ್ನು ನೆರವೇರಿಸಿದರು. "ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಖಡ್ಗವು ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಲಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬರು ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟದಿಂದ ಒಂದು ದಿವ್ಯ ಅನುಭೂತಿಯನ್ನು ಪಡೆದುಕೊಳ್ಳುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ," ಎಂದು ಸಚಿವ ಅಶ್ವತ್ಥ ನಾರಾಯಣ ಬಣ್ಣಿಸಿದರು.
ಈ ಸಂದರ್ಭದಲ್ಲಿ ಅಮೆರಿಕದ ಅಕ್ಕ' ಕನ್ನಡ ಕೂಟಗಳ ಮುಖ್ಯಸ್ಥ ಡಾ. ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.
The 4,000-foot tall bronze statue of Kempegowder, a 108-foot tall statue, will be installed at Kempegowda International Airport near Devanahalli. The weight sword has reached Bangalore from Delhi.The sword, which came in a special truck, was handed over to Higher Education Minister Dr. C.N. Ashwaththa Narayana arrived on Monday. On this occasion, the priests, led by the minister, performed the traditional Shakti pooja for the sword. He also congratulated all the workers who were actively involved in the work.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am