ಬ್ರೇಕಿಂಗ್ ನ್ಯೂಸ್
03-05-22 02:28 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 3 : ಜನತಾ ಪರಿವಾರದ ಹಿರಿಯ ಮುಖಂಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಅಮಿತ್ ಷಾ ಅವರೇ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿದರು. ಈ ವೇಳೆ, ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದಂತೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

ಬಿಜೆಪಿಗೆ ಹೊಸ ಮುತ್ಸದ್ಧಿ ಬಂದಿದ್ದಾರೆ..
ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್. ಅಶೋಕ್, 7 ಬಾರಿ ಎಂಎಲ್ಎ ಆಗಿ ಹಲವು ಹುದ್ದೆಗಳನ್ನ ನಿಭಾಯಿಸಿದ ಹೊರಟ್ಟಿಯವರು ಸರಳ ಸಜ್ಜನ ರಾಜಕಾರಣಿ. ಇವರಿಂದ ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ. ಎಸ್ಎಂ ಕೃಷ್ಣರಂತವರು ಬಂದಿದ್ದಾರೆ. ಇವತ್ತು ಮತ್ತೊಬ್ಬ ಮುತ್ಸದ್ಧಿ ಪಕ್ಷ ಸೇರಿದ್ದಾರೆ. ಮುಂದಿನ ಚುನಾವಣೆಗೆ ಇದು ದಿಕ್ಸೂಚಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಬೇಕು ಅಂತಾ ಜನತಾ ಪರ್ವ ಶುರು ಮಾಡಿದ್ದಾರೆ ಎಂದರು.
![]()
ಇದೇ ತಿಂಗಳ 11ಕ್ಕೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಪರಿಷತ್ ಚುನಾವಣೆಯಲ್ಲಿ ಮುಂದಿನ ಬಾರಿ ಹೊರಟ್ಟಿ ಅವರೇ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.



ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.
Legislative Council chairman and JD(S) leader Basavaraj Horatti on Tuesday joined the BJP in the presence of Union home minister Amit Shah in Bengaluru. After joining the BJP, Horatti said that he will be resigning as Council chairman. "I have good opinion about JD(S), but due to changed situation and voters' belief, I have joined the BJP. I will be resigning as Legislative Council Chairman on May 11."
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am