ಬ್ರೇಕಿಂಗ್ ನ್ಯೂಸ್
05-05-22 01:45 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಲ್ಲದೆ, ಅಕ್ರಮಕ್ಕೆ ಸಹಕಾರ ನೀಡಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಚಾಟಿ ಬೀಸಲಾಗಿದೆ. ನೇಮಕಾತಿ ಅಕ್ರಮದಲ್ಲಿ ಪೊಲೀಸ್ ಅಧಿಕಾರಿಗಳ ಶಾಮೀಲಾತಿ ಇಲ್ಲದೆ ಹಗರಣ ನಡೆಯಲು ಸಾಧ್ಯವಿಲ್ಲವೆಂದೇ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆ ಭಾಗದಲ್ಲಿ ಉಸ್ತುವಾರಿ ಆಗಿದ್ದ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದು ಪರೀಕ್ಷಾ ವಿಭಾಗದ ಇನ್ ಚಾರ್ಜ್ ಆಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.
ಕಲಬುರಗಿಯಲ್ಲಿ ಪರೀಕ್ಷಾ ನೇಮಕಾತಿ ವಿಭಾಗದ ಉಸ್ತುವಾರಿ ಹೊಂದಿದ್ದ ಡಿವೈಎಸ್ಪಿ ಆರ್.ಆರ್.ಹೊಸಮನಿ ಮತ್ತು ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಅಮಾನತು ಮಾಡಲಾಗಿದೆ. ಹೊಸಮನಿ ಫಿಂಗರ್ ಪ್ರಿಂಟ್ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ದಿಲೀಪ್ ಸಾಗರ್, ಕಲಬುರ್ಗಿ ಮಹಿಳಾ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ದೊಡ್ಡ ಮಟ್ಟದ ಅಕ್ರಮ ಆಗಿರುವ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ದಿಲೀಪ್ ಸಾಗರ್ ಉಸ್ತುವಾರಿಯಾಗಿದ್ದರು.


ಇದೇ ವೇಳೆ, ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಹಕರಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್, ಪೊಲೀಸ್ ಪೇದೆ ಹಯ್ಯಾಳಿ ದೇಸಾಯಿಯನ್ನೂ ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಳೆದ ಒಂದು ವಾರದ ಹಿಂದೆಯೇ ಸಿಐಡಿಯಿಂದ ಬಂಧಿಸಲ್ಪಟ್ಟಿದ್ದ ಹಯ್ಯಾಳಿ ದೇಸಾಯಿಯನ್ನು ಅಧಿಕಾರಿಗಳು ಡ್ರಿಲ್ ಗೆ ಒಳಪಡಿಸಿದ್ದಾರೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಮತ್ತು ಮಂಜುನಾಥ್ ಮೇಳಕುಂದಿ ಜೊತೆಗಿನ ಸಂಪರ್ಕ ಮತ್ತು ಹಣದ ವಹಿವಾಟು ನಡೆಸಿರುವ ಖಚಿತ ಸಾಕ್ಷ್ಯ ಸಿಕ್ಕ ಬಳಿಕ ಹಯ್ಯಾಳಿ ದೇಸಾಯಿಯನ್ನು ಪೊಲೀಸ್ ಪೇದೆ ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.

ಇದೇ ಸಂದರ್ಭದಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ಕಾಂಗ್ರೆಸ್ ಮುಖಂಡ ಆರ್.ಡಿ.ಪಾಟೀಲ್ ಜೊತೆ ನಿಕಟ ನಂಟು ಹೊಂದಿದ್ದ ಆರೋಪದಲ್ಲಿ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ವಿಚಾರಣೆಗೆ ಒಳಪಡಿಸಿದ್ದು ಆರೋಪಿಗಳ ಜೊತೆ ನಂಟು ಸಾಬೀತಾದಲ್ಲಿ ಅಮಾನತು ಶಿಕ್ಷೆ ನೀಡುವ ಸಾಧ್ಯತೆಯಿದೆ. ಈ ಹಿಂದೆ ಅಳಂದ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದ ಮಲ್ಲಿಕಾರ್ಜುನ ಸಾಲಿ, ಕಳೆದ ಎಪ್ರಿಲ್ 30ರಂದು ಲಿಂಗಸುಗೂರು ಡಿವೈಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು.
Illegal PSI appointment, unlawful actions to prevent suspension of officers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm