ಬ್ರೇಕಿಂಗ್ ನ್ಯೂಸ್
05-05-22 03:37 pm HK Desk News ಕರ್ನಾಟಕ
ಮೈಸೂರು, ಮೇ 5: ಪಿಎಸ್ಐ ನೇಮಕಾತಿ ಹಗರಣದಲ್ಲಿ ಸುಮಾರು 300 ಕೋಟಿ ರೂಪಾಯಿ ಹಣ ಪಡೆಯಲಾಗಿದೆ. ಒಬ್ಬೊಬ್ಬ ಅಭ್ಯರ್ಥಿಯಿಂದ 40 ಲಕ್ಷದಿಂದ ಒಂದು ಕೋಟಿ ವರೆಗೆ ಹಣ ಪಡೆದಿದ್ದಾರೆ. ಆದರೆ ಸರಕಾರ ಇಷ್ಟೊಂದು ಗಂಭೀರ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿತ್ತು. ಈಗ ಕೆಲವು ಮಧ್ಯವರ್ತಿಗಳನ್ನು ಮಾತ್ರ ಬಂಧಿಸುತ್ತಿದ್ದಾರೆ. ಹಗರಣಕ್ಕೆ ಕಾರಣವಾದವರನ್ನು ಬಂಧಿಸುತ್ತಿಲ್ಲ. ಪ್ರಮುಖ ಆರೋಪಿಗಳ ಬಂಧನಕ್ಕಾಗಿ, ನಿಷ್ಪಕ್ಷಪಾತ ತನಿಖೆಗಾಗಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಮೂಲಕ ತನಿಖೆ ಆಗಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಈ ಪರಿ ಭ್ರಷ್ಟಾಚಾರ ನಡೆಯುತ್ತಿದ್ದರೂ, ಕೇಂದ್ರದ ನಾಯಕರು ಸರಕಾರವನ್ನು ಸಮರ್ಥಿಸುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಪರ ಮುದ್ರೆ ಒತ್ತುತ್ತಿದ್ದಾರೆ. ಇದರ ನಡುವೆ, ಭ್ರಷ್ಟಾಚಾರದ ಬಗ್ಗೆ ಮಾಹಿತಿ ಕೊಟ್ಟ ಪ್ರಿಯಾಂಕ ಖರ್ಗೆ ಅವರಿಗೆ ಸರಕಾರ ನೋಟೀಸ್ ಕೊಟ್ಟಿದೆ. ಅವರೇನು ಸಾಕ್ಷಿದಾರರಾ, ಅಪರಾಧಿಯಾ.. ಅವನ ಮೇಲೆ ಕ್ರಿಮಿನಲ್ ಪ್ರಕರಣ ಇದೆಯಾ. ಇದು ರಾಜಕೀಯ, ಜನರ ಗಮನ ಬೇರೆಡೆ ಸೆಳೆಯಲು ಸರಕಾರ ಈ ರೀತಿ ಮಾಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಕರಣದಲ್ಲಿ ಸಚಿವ ಅಶ್ವತ್ಥ ನಾರಾಯಣ ಕಡೆಯವರು ಇಬ್ಬರಿದ್ದಾರೆ. ಒಬ್ಬ ದರ್ಶನ್ ಗೌಡ, ಇನ್ನೊಬ್ಬ ನಾಗೇಶ್ ಗೌಡ. ಅವರಿಬ್ಬರೂ ಅಶ್ವತ್ಥ ನಾರಾಯಣ್ ಸಂಬಂಧಿಕರು. ಇವರಿಗೆ ಅಂಕಗಳನ್ನು ಜಾಸ್ತಿ ಕೊಡಲಾಗಿದೆ. ಅವರನ್ನು ವಿಚಾರಣೆಗೆ ಕರೆದು ಬಿಟ್ಟು ಬಿಟ್ಟಿದ್ದಾರೆ. ದರ್ಶನ್ ಗೌಡ ಮೊದಲ ಪತ್ರಿಕೆಯಲ್ಲಿ ಕಡಿಮೆ ಅಂಕ ಪಡೆದಿದ್ದ. ಎರಡನೇ ಪತ್ರಿಕೆಯಲ್ಲಿ ಹೆಚ್ಚು ಅಂಕ ಪಡೆದಿದ್ದಾನೆ. ಆತ ಕಿವಿಗೆ ಬ್ಲೂಟೂತ್ ಹಾಕ್ಕೊಂಡು ಪರೀಕ್ಷೆ ಬರೆದಿದ್ದಾನೆ. ಖಾಲಿ ಪೇಪರ್ ಕೊಟ್ಟು ಆಮೇಲೆ ಬರೆಸಿದ್ದಾರೆ.
ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ತಿರುಗುತ್ತಾರೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ, ಕಳ್ಳರು ಇನ್ನೇನು ಹೇಳುತ್ತಾರೆ, ಕಳ್ಳ ಸತ್ಯ ಒಪ್ಪಿಕೊಳ್ಳುತ್ತಾನೆಯೇ.. ಸಚಿವ, ಎಂಎಲ್ಸಿಗಳು ಪತ್ರ ಬರೆದಾಗ ಏಕೆ ತನಿಖೆ ಮಾಡಲಿಲ್ಲ. ಮರು ಪರೀಕ್ಷೆ ಏಕೆ ಮಾಡಿದ್ರಿ. ಈಗ ವರ್ಗಾವಣೆ ಏಕೆ ಮಾಡಿದ್ರಿ.. ಇವರು ಮಂತ್ರಿಯಾಗಲು ಲಾಯಕ್ಕಾ.. ನಾಲಾಯಕ್ಕಾ. ಒಬ್ಬ ಸರಕಾರದ ಸಚಿವನೇ ಪತ್ರ ಬರೆದರೂ ಏನೂ ಆಗಿಲ್ಲ ಎಂದಿದ್ರು. ಈಗ ಅಕ್ರಮ ಆಗಿದೆ ಅಂದ್ರೆ ಏನರ್ಥ ಎಂದು ಪ್ರಶ್ನೆ ಮಾಡಿದರು.
The PSI recruitment scam has received nearly Rs 300 crore. 40 lakhs to one crore from a candidate. But the government has tried to cover up a serious case. Now only a few intermediaries are being arrested. Not arresting those responsible for the scam. Leader of the Opposition Siddaramaiah has demanded an investigation by the High Court Chief Justice for impartial investigation and imprisonment of the main accused.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm